ಪೋಸ್ಟ್‌ಗಳು

Beatiful Mangalore ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

"ನೆಲ್ಲಿತೀರ್ಥ" ಪವಿತ್ರ ಗುಹಾತೀರ್ಥದ ಸನ್ನಿಧಿ

ಇಮೇಜ್
ತುಳುನಾಡಿನ ಪ್ರಾಚೀನ ದೇವಾಲಯಗಳಿಗೆಲ್ಲ ಒಂದು ಭವ್ಯ ಪರಂಪರೆಯಿದೆ. ಹಿಂದೆ ಈ ಪ್ರದೇಶವನ್ನು ಆಳಿದ್ದ ಆಳುಪ, ವಿಜಯನಗರ, ಕೆಳದಿ ಸಂಸ್ಥಾನಗಳಿಂದಲೂ, ಸ್ಥಳೀಯ ರಾಜವಂಶೀಯರಿಂದಲೂ ಆರಾಧಿಸಲ್ಪಡುತ್ತಿದ್ದ ಅನೇಕ ದೇವಾಲಯಗಳು ಇಲ್ಲಿವೆ. ದೇವಾಲಯಗಳ ವಿನಿಯೋಗಗಳು ಸಾಂಗವಾಗಿ ನಡೆಯಬೇಕೆಂಬ ಸದುದ್ದೇಶದಿಂದ, ಅಂದಿನ ಅರಸರು ಬಿಟ್ಟುಕೊಟ್ಟ ದತ್ತಿ ಶಾಸನಗಳ ಸಂಖ್ಯೆ ಅಪರಿಮಿತವಾಗಿದೆ. ಇಲ್ಲಿಯ ತುಂಡರಸರಲ್ಲಿ ಚೌಟರು ಸುಪ್ರಸಿದ್ಧರು.  ಇವರು ಮೂಲತಃ ಕರಾವಳಿಯ ಉಳ್ಳಾಲದವರಾಗಿದ್ದು, ಮುಂದೆ ಪುತ್ತಿಗೆ, ಮೂಡಬಿದಿರೆಗಳಲ್ಲಿ ಕೇಂದ್ರಸ್ಥಾನವನ್ನೇರ್ಪಡಿಸಿ ರಾಜ್ಯಭಾರ ಮಾಡುತ್ತಿದ್ದರು. ಇವರು ಸೋಮನಾಥ ದೇವರ ಭಕ್ತರಾಗಿದ್ದರು. ಆದಕಾರಣದಿಂದ ಇವರು ಆಳಿಕೊಂಡಿದ್ದ ಭಾಗದಲ್ಲಿ ಅನೇಕ ಸೋಮನಾಥ ದೇವಾಲಯಗಳಿವೆ. ಉಳ್ಳಾಲ, ಪುತ್ತಿಗೆ, ಅಮ್ಮೆಂಬಳ, ಪೆರ್ಮುದೆ, ಪೋರ್ಕೋಡಿ, ಗುರುಪುರ, ಇರಾ, ನೆಲ್ಲಿತೀರ್ಥ ಮೊದಲಾದ ಸೋಮನಾಥ ದೇವಾಲಯಗಳು ಇಲ್ಲಿವೆ. ಇವುಗಳಲ್ಲಿ ನೆಲ್ಲಿತೀರ್ಥವು ಪವಿತ್ರ ಗುಹಾತೀರ್ಥದ ಸನ್ನಿಧಿಯಲ್ಲಿದ್ದು ಅತಿಮಹಿಮಾನ್ವಿತವಾಗಿದೆ. ಪೂರ್ವಕಾಲದಲ್ಲಿ ಇದು ಜಾಬಾಲಿಮುನಿಯ ಸಿದ್ಧಾಶ್ರಮವಾಗಿತ್ತೆಂದು ಪುರಾಣೋಕ್ತಿಯಿದೆ. ಶ್ರ್‍ಈಕ್ಷೇತ್ರದಲ್ಲಿರುವ ಅರಸರ ಮಂಚ, ಅರಸುಕಟ್ಟೆಗಳು ಇಲ್ಲಿಗೆ ಚೌಟರಸರು ಆಗಾಗ ಭೇಟಿ ಕೊಡುತ್ತಿದ್ದರೆಂಬುದಕ್ಕೆ ಮೂಕಸಾಕ್ಷಿಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸವನ್ನು ಬರೆದಿರುವ ದಿ. ಗಣಪತಿರಾವ್ ಐ...

ಗಡಾಯಿ ಕಲ್ಲು(ಜಮಲಾಬಾದ್ ಕೋಟೆ)

ಇಮೇಜ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೆಂದರೆ ಎಲ್ಲರ ಮುಂದೆ ಮೂಡುವ ದೃಶ್ಯ `ಗಡಾಯಿ ಕಲ್ಲು'. ಬೆಳ್ತಂಗಡಿ ತಾಲೂಕಿನಲ್ಲೇ ಅತ್ಯಂತ ಆಕರ್ಷಣೆಯ, ಚಾರಣಿಗರಿಗೆ, ಪ್ರವಾಸಿಗರಿಗೆ ಪ್ರಿಯ ತಾಣವಾಗಿ ಈ ಕಲ್ಲು ವಿರಾಜಿಸುತ್ತಿದೆ.  ಕು ದುರೆ ಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ  `ನಡ' ಗ್ರಾಮಕ್ಕೆ ಸೇರಿರುವ  ಮತ್ತು ರಾಜ್ಯ ಹೆದ್ದಾರಿಗೆ ಸನಿಹದಲ್ಲಿರುವ ಈ ಗಡಾಯಿಕಲ್ಲು ಹಲವಾರು ಐತಿಹ್ಯಗಳನ್ನೂ ಚಾರಿತ್ರಿಕ ದಾಖಲೆಗಳನ್ನೂ ಹೊಂದಿದೆ. ಅದಮ್ಯ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಈ ಕಲ್ಲು ಪಶ್ಚಿಮ ಘಟ್ಟದ ಹಿನ್ನಲೆಯೊಂದಿಗೆ ಶೋಭಿಸುತ್ತಾ ಚಾರಣಿಗರನ್ನು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಕೈ ಬೀಸಿ ಕರೆಯುತ್ತಿದೆ.   ಸಮುದ್ರ ಮಟ್ಟದಿಂದ 1788 ಅಡಿ ಎತ್ತರದಲ್ಲಿದೆ ಗಡಾಯಿಕಲ್ಲು. ಇದರ ಮೇಲ್ಭಾಗದಲ್ಲಿ ನರಸಿಂಹಗಡ ಅಥವಾ ಜಮಲಾಗಡ ಎಂಬ ಕೋಟೆ ಕಾಣಬಹುದಾಗಿದೆ. 2,800 ಮೆಟ್ಟಿಲುಗಳನ್ನೇರಿದಾಗ ಜಮಲಾಗಡದ ಮೇಲ್ಭಾಗ ತಲುಪಬಹುದು. ಗಡಾಯಿಕಲ್ಲಿನ ಮೇಲಕ್ಕೇರುತ್ತಾ ಸಾಗಿದಂತೆ ಒಂದು ದ್ವಾರ ಸಿಗುತ್ತದೆ. ಈ ದ್ವಾರದ ನಂತರ ಕಲ್ಲನ್ನೇ ಕಡಿದು ವಿನ್ಯಾಸಗೊಳಿಸಿ ಮೆಟ್ಟಿಲು ರಚಿಸಲ್ಪಟ್ಟಿದೆ. ತುಂಬಾ ಕಡಿದಾದ ಈ ಮೆಟ್ಟಿಲುಗಳ ಮೇಲೆ ಸಾಗುವುದೇ ಒಂದು ಪ್ರಯಾಸ ಮತ್ತು ಸಾಹಸದ ಕಾರ್ಯ. ಇಂಡೋ ಸಾರ್ಸೆನಿಕ್ ಶೈಲಿಯನ್ನು ಹೋಲುವ ಶಿಲ್ಪ ಚಿತ್ರಗಳು ಇಲ್ಲಿನ ಒಂದನೇ ಮಹಾ ದ್ವಾರಗಳಲ್ಲಿ ಕಂಡುಬರುತ್ತವೆ. ಗಡಾಯಿಕಲ್ಲಿನ ಮೇಲ್ಭ...

ಮಂಗಳೂರಿನ ನಿಜವಾದ ರೂವಾರಿ ಯು.ಶ್ರೀನಿವಾಸ ಮಲ್ಯ

ಇಮೇಜ್
ಉಳ್ಳಾಲ ಶ್ರೀನಿವಾಸ ಮಲ್ಯ ಈ ಹೆಸರು ಮಂಗಳೂರಿನ ಇತಿಹಾಸದ ಪುಟಗಳಲ್ಲಿ ಇಂದಿಗೂ ಅಮರ,ಅವರು ಆ ಕಾಲದಲ್ಲಿ ಮಂಗಳೂರಿನ ಕನಸನ್ನು ಕಟ್ಟಿರದಿದ್ದರೆ ಬಹುಷ ನಾವು ಇಂದು ಕಾಣುವ  ಭವ್ಯ ಮಂಗಳೂರನ್ನು ಊಹಿಸಲಿ ಆಸಾಧ್ಯ. ಸದ್ದುಗದ್ದಲ ಇಲ್ಲದೆ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ ಕೊಡುಗೆ ಅನನ್ಯ. ಪ್ರಸಕ್ತ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿ ಚಿಂತನೆಯ ಮಟ್ಟಿಗೆ ಯು.ಎಸ್. ಮಲ್ಯರು ಪ್ರಾತಃಸ್ಮರಣೀಯರು.  ಅಸಾಧಾರಣ ಬುದ್ಧಿವಂತಿಕೆ, ವ್ಯವಹಾರ ಕುಶಲತೆ ಹೊಂದಿರುವ ನಮ್ಮ ಕರಾವಳಿಯ ಕೊಂಕಣ ಸಾರಸತ್ವರು ಮತ್ತು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ಈ ನೆಲದ ವಿಭಿನ್ನ ರಂಗಗಳಿಗೆ ಅಸಂಖ್ಯ ಮಹನೀಯರನ್ನು ನೀಡಿದೆ. ದೇಶಭಕ್ತ ಕಾರ್ನಾಡ್ ಸದಾಶಿವರಾಯರು, ಸಾಮಾಜಿಕ ಪರಿವರ್ತನೆಯ ಹರಿಕಾರ ಕುದ್ಮುಲ್ ರಂಗರಾಯರು, ಬ್ಯಾಂಕಿಂಗ್ ಆಂದೋಲನದ ರೂವಾರಿಗಳಲ್ಲೊಬ್ಬರಾದ ಅಮ್ಮೆಂಬಳ ಸುಬ್ಬರಾಯರು, ರಾಷ್ಟ್ರಕವಿ ಎನಿಸಿದ ಗೋವಿಂದ ಪೈಗಳು… ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಉಳ್ಳಾಲ ಶ್ರೀನಿವಾಸ ಮಲ್ಯ ಕೂಡಾ ಗೌಡ ಸಾರಸ್ವತ ಬ್ರಾಹ್ಮಣ ಕುಟುಂಬದಿಂದ ಬಂದವರೇ. ಶ್ರೀನಿವಾಸ ಮಲ್ಯರು 1902 ಇಸವಿ ನವಂಬರ 21ರಂದು ಜಿಲ್ಲೆಯ ಹೆಸರಾಂತ ಉಳ್ಳಾಲ ಮಲ್ಯ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಶ್ರೀ ಉಳ್ಳಾಲ ಮಂಜುನಾಥ ಮಲ್ಯ ಮತ್ತು ತಾಯಿ ಸರಸ್ವತಿ ಯಾನೆ ರುಕ್ಮಾಬಾಯಿ. ಹಿರಿಯ ಅಣ್ಣ ಮಾಧವ ಮಲ್ಯ, ಇನ್ನೊಬ್ಬ ತಮ್ಮ ಜಿಲ್ಲೆಯ ಹೆಸರಾಂತ ಸಾಮಾಜಿಕ ...

ಮಂಗಳೂರು ಟೈಲ್ಸ್..

ಇಮೇಜ್
ಒಂದು ಕಾಲಕ್ಕೆ ಮಂಗಳೂರು ಹೆಂಚು ಇಲ್ಲಿನ ಜನರ ಜೀವನಾಡಿಯಾಗಿತ್ತು. ಬಡವರು ಮನೆ ಕಟ್ಟಲು ಮುಳಿಹುಲ್ಲನ್ನು ಆಶ್ರಯಿಸುತ್ತಿ ದ್ದರೆ, ಶ್ರೀಮಂತರು ಹೆಂಚನ್ನು ಬಳಸುತ್ತಿದ್ದರು.ಸ್ವಾತಂತ್ರಪೂರ್ವದಲ್ಲೇ ಅವಿಭಜಿತ ದಕ್ಷಿಣ ಕನ್ನಡ ಹೆಂಚು ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಇಲ್ಲಿನ ಹೆಂಚು ಗಳು ‘ಮಂಗಳೂರು ಹೆಂಚು’ ಎಂದೇ ಪ್ರಸಿದ್ಧಿ ಪಡೆದಿತ್ತು. ಬ್ರಿಟಿಷರು ಕೂಡ ಇಲ್ಲಿನ ಹೆಂಚಿಗೆ ತಲೆ ತೂಗಿದ್ದರು. ಯುರೋಪ್, ಆಫ್ರಿಕಾ ಖಂಡ ಗಳಿಗೆ ಹಾಗೂ ದೇಶಾ ದ್ಯಂತ ಇಲ್ಲಿಂದಲೇ ಹೆಂಚುಗಳು ರಫ್ತಾಗುತ್ತಿದ್ದವು. ನೂರಾರು ಕುಟುಂಬಗಳು ಈ ಉದ್ಯಮವನ್ನು ಆಶ್ರ ಯಿಸಿದ್ದವು. ಸಾವಿರಾರು ಕಾರ್ಮಿಕರ ಬದುಕನ್ನು ಇದು ಹಸನುಗೊಳಿಸಿತ್ತು.ಆದರೆ, ಬರಬರುತ್ತಾ ಹೆಂಚಿನ ಮನೆ, ಅಂಗಡಿಗಳು ಕಾಂಕ್ರಿಟ್ ಮಯವಾಗ ತೊಡಗಿತು. ಶ್ರೀಮಂತರು ಮಾತ್ರವಲ್ಲ ಮಧ್ಯಮ ವರ್ಗದ ಜನರೂ ಆರ್‌ಸಿಸಿ ಕಟ್ಟಡ ನಿರ್ಮಾಣ ಶುರುವಿಟ್ಟರು. ಹಾಗಾಗಿ ಇದೀಗ ನಗರ ಮಾತ್ರವಲ್ಲ ಗ್ರಾಮಾಂತರ ಪ್ರದೇಶಗಳಲ್ಲೂ ಆರ್‌ಸಿಸಿ ಮನೆಗಳನ್ನು ಕಾಣಬಹುದು. ಹೆಂಚಿನ ಮನೆ ನಿರ್ಮಾಣಕ್ಕೆ ಮುಂದಾ ದರೆ ಅಂತಹವರನ್ನು ತಾತ್ಸಾರದ ಭಾವನೆ ಯಿಂದ ನೋಡುವವರಿಗೂ ಇಂದಿನ ಕಾಲದಲ್ಲಿ ಕೊರತೆ ಇಲ್ಲ. ಹಾಗಾಗಿ ಈಗ ಎಲ್ಲೆಡೆ ಕಾಂಕ್ರಿಟ್ ಕಟ್ಟಡ ಗಳೇ ನಿರ್ಮಾಣ ವಾಗುತ್ತಿದೆ. ಇದರ ನೇರ ಪರಿಣಾಮ ಹೆಂಚು ಉದ್ಯಮದ ಮೇಲಾಗಿದೆ.ಸ್ವರ್ಣ ಯುಗ ದಲ್ಲಿದ್ದ ಮಂಗ ಳೂರು ಹೆಂಚಿನ ಸ್ಥಿತಿ ಇದೀಗ ಆದೋ ಗತಿಗೆ ಇಳಿಸಿದ್ದು, ಯಾರೂ ಕೇಳುವವರಿಲ್ಲದ ಸ್ಥಿತಿ ನಿರ್ಮ...

ಪರಶುರಾಮ ಸೃಷ್ಟಿ ಮಂಗಳೂರು...

ಇಮೇಜ್
'ಮಂಗಳೂರು' ಹೆಸರೇ ಸೂಚಿಸುವಂತೆ ಮಂಗಳಾ ದೇವಿಯಿಂದ ತನ್ನ ಹೆಸರನ್ನು ಪಡೆದುಕೊಂಡಿದೆ.ನೆರೆಯ ಕೇರಳಿಗರಿಗೆ ಇಂದಿಗೂ ಇದು ಮಂಗಳಾಪುರ.ಇದರ ಹಿನ್ನೆಲೆ ಗಮನಿಸಿದರೆ ಇದು ಹೌದು ಕೂಡ.ಸ್ಥಳೀಯ ದೇವತೆಯಾದ ಮಂಗಳಾ ದೇವಿಯಿಂದ ಮಂಗಳೂರು ತನ್ನ ಹೆಸರನ್ನು ಪಡೆದುಕೊಂಡಿದೆ.ಮತ್ಸ್ಯೇಂದ್ರ ನಾಥನೆಂಬ ನಾಥ್ ಪಂಥದ ಸಂತ, ಪೆರುಮಳಾದೇವಿ ಎಂಬ ಕೇರಳದ ರಾಜಕುಮಾರಿಯ ಜೊತೆ ಇಲ್ಲಿಗೆ ಬಂದಿದ್ದ. ಅವನು ರಾಜಕುಮಾರಿಯನ್ನು ತನ್ನ ಪಂಥಕ್ಕೆ ಪರಿವರ್ತಿಸಿಕೊಂಡು "ಮಂಗಳಾದೇವಿ" ಎಂದು ಮರುನಾಮಕರಣ ಮಾಡಿದನು. ಸ್ವಲ್ಪ ಸಮಯದ ಅನಾರೋಗ್ಯದಿಂದ ಮಂಗಳಾದೇವಿಯು ನಿಧನ ಹೊಂದಿದ್ದರಿಂದ ಅವರು ತಮ್ಮ ಪ್ರಯಾಣವನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಅವಳ ಹೆಸರಿನಲ್ಲಿ ಬೋಳಾರದಲ್ಲಿ ಒಂದು ದೇವಸ್ಥಾನವನ್ನು ನಿರ್ಮಿಸಲಾಯಿತು.ಇದುವೇ ಇತಿಹಾಸ ಪ್ರಸಿದ್ದ ಮಂಗಳಾ ದೇವಿ ದೇವಸ್ಥಾನ. ಅದು ನಂತರ ಕ್ರಿ.ಶ.968 ರಲ್ಲಿ ಅಲೂಪ ದೊರೆ ಕುಂದ ವರ್ಮನಿಂದ ಜೀರ್ಣೋ ದ್ಧಾರಕ್ಕೆ ಒಳಪಟ್ಟಿತು.ಈ ನಗರದ ಹಲವು ಪುರಾತನ ಉಲ್ಲೇಖಗಳಲ್ಲಿ ಒಂದನ್ನು ಪಾಂಡ್ಯ ರಾಜ ಚೆಟ್ಟಿಯನ್ ನೀಡಿದ್ದಾನೆ. ಅವನು ಕ್ರಿ.ಶ.719 ರಲ್ಲಿ ಇದನ್ನು ಮಂಗಲಾಪುರಂ ಎಂದು ಕರೆದಿದ್ದ. 11 ನೇ ಶತಮಾನದ ಅರಬ್ಬಿ ಪ್ರಯಾಣಿಕ ಇಬ್ನ ಬತೂತ ಮಂಗಳೂರನ್ನು ಮಂಜರೂರ್ ಎಂದು ಉಲ್ಲೇಖಿಸಿದ್ದಾನೆ.ಅತೀ ಸಂಪತ್ಭರಿತ ಪ್ರದೇಶವಾದ ಇದು ಕದಂಬರು, ಆಳುಪರು,ವಿಜಯನಗರದ ಅರಸರು,ಹೈದರಾಲಿ-ಟಿಪ್ಪು ಸುಲ್ತಾನರು ಆಳ್ವಿಕೆಯಲ್ಲಿತ್ತು....