Posts

Showing posts with the label Dakshin kannada

ಗಡಾಯಿ ಕಲ್ಲು(ಜಮಲಾಬಾದ್ ಕೋಟೆ)

Image
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೆಂದರೆ ಎಲ್ಲರ ಮುಂದೆ ಮೂಡುವ ದೃಶ್ಯ `ಗಡಾಯಿ ಕಲ್ಲು'. ಬೆಳ್ತಂಗಡಿ ತಾಲೂಕಿನಲ್ಲೇ ಅತ್ಯಂತ ಆಕರ್ಷಣೆಯ, ಚಾರಣಿಗರಿಗೆ, ಪ್ರವಾಸಿಗರಿಗೆ ಪ್ರಿಯ ತಾಣವಾಗಿ ಈ ಕಲ್ಲು ವಿರಾಜಿಸುತ್ತಿದೆ.  ಕು ದುರೆ ಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ  `ನಡ' ಗ್ರಾಮಕ್ಕೆ ಸೇರಿರುವ  ಮತ್ತು ರಾಜ್ಯ ಹೆದ್ದಾರಿಗೆ ಸನಿಹದಲ್ಲಿರುವ ಈ ಗಡಾಯಿಕಲ್ಲು ಹಲವಾರು ಐತಿಹ್ಯಗಳನ್ನೂ ಚಾರಿತ್ರಿಕ ದಾಖಲೆಗಳನ್ನೂ ಹೊಂದಿದೆ. ಅದಮ್ಯ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಈ ಕಲ್ಲು ಪಶ್ಚಿಮ ಘಟ್ಟದ ಹಿನ್ನಲೆಯೊಂದಿಗೆ ಶೋಭಿಸುತ್ತಾ ಚಾರಣಿಗರನ್ನು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಕೈ ಬೀಸಿ ಕರೆಯುತ್ತಿದೆ.   ಸಮುದ್ರ ಮಟ್ಟದಿಂದ 1788 ಅಡಿ ಎತ್ತರದಲ್ಲಿದೆ ಗಡಾಯಿಕಲ್ಲು. ಇದರ ಮೇಲ್ಭಾಗದಲ್ಲಿ ನರಸಿಂಹಗಡ ಅಥವಾ ಜಮಲಾಗಡ ಎಂಬ ಕೋಟೆ ಕಾಣಬಹುದಾಗಿದೆ. 2,800 ಮೆಟ್ಟಿಲುಗಳನ್ನೇರಿದಾಗ ಜಮಲಾಗಡದ ಮೇಲ್ಭಾಗ ತಲುಪಬಹುದು. ಗಡಾಯಿಕಲ್ಲಿನ ಮೇಲಕ್ಕೇರುತ್ತಾ ಸಾಗಿದಂತೆ ಒಂದು ದ್ವಾರ ಸಿಗುತ್ತದೆ. ಈ ದ್ವಾರದ ನಂತರ ಕಲ್ಲನ್ನೇ ಕಡಿದು ವಿನ್ಯಾಸಗೊಳಿಸಿ ಮೆಟ್ಟಿಲು ರಚಿಸಲ್ಪಟ್ಟಿದೆ. ತುಂಬಾ ಕಡಿದಾದ ಈ ಮೆಟ್ಟಿಲುಗಳ ಮೇಲೆ ಸಾಗುವುದೇ ಒಂದು ಪ್ರಯಾಸ ಮತ್ತು ಸಾಹಸದ ಕಾರ್ಯ. ಇಂಡೋ ಸಾರ್ಸೆನಿಕ್ ಶೈಲಿಯನ್ನು ಹೋಲುವ ಶಿಲ್ಪ ಚಿತ್ರಗಳು ಇಲ್ಲಿನ ಒಂದನೇ ಮಹಾ ದ್ವಾರಗಳಲ್ಲಿ ಕಂಡುಬರುತ್ತವೆ. ಗಡಾಯಿಕಲ್ಲಿನ ಮೇಲ್ಭ...

ಬ್ಯಾರಿಗಳು

Image
" ಬ್ಯಾರಿ " ಎಂಬ ಪದವು ತುಳುವಿನ ಬ್ಯಾರ ಎಂಬ ಶಬ್ದ ದಿಂದ ಉದ್ಭವಗೊಂಡಿದ್ದು ವ್ಯಾಪಾರ ವಹಿವಾಟು ಎಂದು ಅದರ ಅರ್ಥ. ಪ್ರಾಚೀನ ಕಾಲದಿಂದಲೂ ಈ ಜನಾಗದ ಹೆಚ್ಚಿನ ಜನರು ವ್ಯಾಪಾರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದರು. ಆದ್ದರಿಂದ ಸ್ಥಳೀಯ ತುಳುವರು ಅವರನ್ನು ಬ್ಯಾರಿಗಳೆಂದು ಕರೆಯುತ್ತಿದ್ದರು. ಕ್ರಿ.ಶ.1891ರ ಜನಗಣತಿಯ ಪ್ರಕಾರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ ಕಾಲದಲ್ಲಿ 90,345 ಬ್ಯಾರಿ ವ್ಯಾಪಾರಿಗಳಿದ್ದರು. ಮತ್ತು ಇದು ಒಟ್ಟು ವರ್ತಕರ ಪ್ರಮಾಣಕ್ಕೆ ಹೋಲಿಸಿದರೆ ಸುಮಾರು ಶೇಕಡಾ 92ರಷ್ಟಾಗಿತ್ತು. ಆದ್ದರಿಂದಲೇ ಅವರನ್ನು ಬ್ಯಾರಿಗಳೆಂದು ಕರೆಯಲಾಗುತ್ತಿತ್ತು ಮತ್ತು ಇದು ಅನ್ವರ್ಥಕನಾಮವೂ ಆಗಿತ್ತು. ಬ್ಯಾರಿಗಳು ತುಳುನಾಡು ಎಂದು ಹಿಂದೆ ಕರೆಯಲಾಗುತ್ತಿದ್ದ ಕರ್ನಾಟಕದ ಈಗಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಾಸವಾಗಿರುವ ಒಂದು ಮುಸ್ಲಿಂ ಜನಾಂಗ. ಅವರು ತಮ್ಮದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಒಂದು ಸಾಮಾಜಿಕ ಪಂಗಡ. ಬ್ಯಾರಿಗಳಿಗೆ ಕೊಂಕಣ ತೀರದ ನವಾಯತರು ಮತ್ತು ಮಲಬಾರಿನ ಮಾಪಿಳ್ಳಗಳಿಗೆ ಸಮನಾದ ಒಂದು ಮಹತ್ವದ ಸಾಂಸ್ಕೃತಿಕ ಸಂಪ್ರದಾಯವಿದೆ. 1891ರ ಕೂಚ್ ಮನ್ ಸಮೀಕ್ಷಾ ವರದಿಯಲ್ಲಿ ನಮೂದಾಗಿರುವಂತೆ ಈ ಜನಾಂಗದ ಪ್ರಮುಖ ಗುರುತು ಎಂದರೆ ಪುರುಷರಿಗೆ ಬ್ಯಾರಿ ಮತ್ತು ಮಹಿಳೆಯರಿಗೆ ಬ್ಯಾರ್ದಿ ಎಂಬ ಒಕ್ಕಣೆಯಿರುವುದು. ಅಲ್ಲದೆ ಈ ಜನಾಗಕ್ಕೂ...