Posts

Showing posts with the label Indian Tourism

ಸುಲ್ತಾನ್ ಬತ್ತೇರಿ

Image
ಸುಲ್ತಾನ್ ಬತ್ತೇರಿ 1940ರಲ್ಲಿ ಕರಾವಳಿ ನಗರ ಮಂಗಳೂರು ಹಲವಾರು ಐತಿಹಾಸಿಕ ಪ್ರದೇಶಗಳಿಗೆ ಹೆಸರು ವಾಸಿಯಾಗಿದೆ. ಹಾಗೂ ಯಾತ್ರಿಕರ ಪ್ರವಾಸಿ ತಾಣವೂ ಹೌದು. ಆನಮೇಕ ರಾಜ ಮಹರಾಜರು ಈ ಪ್ರದೇಶದ ಮೇಲೆ ತಮ್ಮ ಅಧಿಪತ್ಯವನ್ನು ಸ್ಥಾಪಿಸಿದ್ದರು. ಇದರಲ್ಲಿ ಮಂಗಳೂರಿನ ಬೋಳುರಿನ ಸುಲ್ತಾನ್ ಬತ್ತೇರಿ ಒಂದು. ಬ್ರಿಟಿಷ್‌ ನೌಕೆಗಳು ಗುರುಪುರ ನದಿಯನ್ನು ಪ್ರವೇಶಿಸುವುದನ್ನು ತಡೆಗಟ್ಟಲು, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಹೋರಾಟಗಾರ ಮೈಸೂರು ಹುಲಿ ಟಿಪ್ಪುಸುಲ್ತಾನನು 1784 ರಲ್ಲಿ ಇದನ್ನು ನಿರ್ಮಿಸಿದನು. ಐತಿಹಾಸಿಕವಾಗಿ ಮಹತ್ವವಾಗಿರುವ ಈ ರಾಷ್ಟ್ರೀಯ ಸ್ಮಾರಕವು ಇತ್ತೀಚಿಗೆ ನವೀಕರಣಗೊಂಡಿದ್ದು, ಸ್ವಾತಂತ್ರ್ಯ ಹೋರಾಟದ ದಿವ್ಯ ಕುರುಹಾಗಿ ಉಳಿದಿದೆ. ಈ ಕೋಟೆಯನ್ನು ಕಪ್ಪು ಕಲ್ಲಿನಿಂದ ನಿರ್ಮಿಸಲಾಗಿದೆ. ಇದು ಒಂದು ಚಿಕ್ಕ ಕಾವಲು ಗೋಪುರ ಮಾದರಿಯ ಕೋಟೆಯಾಗಿದ್ದರೂ ಕೋಟೆಯ ಸುತ್ತಮುತ್ತ ಫಿರಂಗಿಗಳನ್ನು ಸ್ಥಾಪಿಸಲಾಗಿದೆ. ಮತ್ತು ವೈರಿಗಳ ಚಲನವಲನಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ  ರಚಿತವಾಗಿದೆ. ಈ ಕೋಟೆಯ ಅಡಿಭಾಗದಲ್ಲಿ ಸೈನಿಕರ ವಿಶ್ರಾಂತಿ ಕೋಣೆ ಇದೆ. ಮತ್ತು ಸುರಂಗ ಮಾರ್ಗವೂ ಇದೆ ಆದರೆ ಈಗ  ಸಾರ್ವಜನಿಕರಿಗೆ ಇದನ್ನು ನಿರ್ಬಂಧಿಸಲಾಗಿದೆ. ರಾಷ್ಟ್ರಿಯ ಸ್ಮಾರಕವಾಗಿ ಇದು ಘೋಷಣೆ ಯಾದ್ದರಿಂದ ಕೇಂದ್ರ ಪುರತತ್ವ ಇಲಾಖೆ ಇದರ ಮೇಲುಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.  ಸುಲ್ತಾನ್ ಬತ್ತೇರಿ ಸೂರ್ಯಾಸ್ತದ ವಿಹಂಗ...