Posts

Showing posts with the label Karnataka Culture

ಭಗವಾನ್ ಬಾಹುಬಲಿ ವೇಣೂರು.

Image
ಕರಾವಳಿ ನಾಡು ದಕ್ಷಿಣ ಕನ್ನಡ ಜಿಲ್ಲೆ ಅನೇಕ ಪುಣ್ಯ ನೆಲೆಗಳ ಬೀಡು.ವಿವಧ ಜಾತಿ- ಧರ್ಮ, ಸಂಸ್ಕೃತಿಗಳ ಜನರು ಇಲ್ಲಿದ್ದರೂ ಎಲ್ಲಾ ಧರ್ಮಿಯರು ಇಲ್ಲಿ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ.ಇವರಲ್ಲಿ ಅತ್ಯಂತ ಪುರಾತನವಾದ ಜೈನ ಧರ್ಮವು ಒಂದು.ಜೈನ ಧರ್ಮದ ಻ನೇಕ ಪುಣ್ಯ ಕ್ಷೇತ್ರಗಳು ಈ ಕರಾವಳಿ ಭಾಗದಲ್ಲಿವೆ ಇವುಗಳಲ್ಲಿ ಈ ವೇಣೂರು ಕೂಡ ಒಂದು. ವಿರಾಟ್ ವಿರಾಗಿ ವೇಣೂರ ಗೊಮ್ಮ ಟೇಶ್ವರ ನಿಗೆ ಇದೀಗ ಮಹಾ ಮಜ್ಜ ನಕ್ಕೆ ಭರದ ಸಿದ್ಧತೆ. 20 12 ಜನವರಿ 29 ರಂದು ಮಹಾ ಮಜ್ಜ ನಕ್ಕೆ ಈಗಾ ಗಲೇ ದಿನ ನಿಗಧಿ ಯಾಗಿದ್ದು,ಪೂರ್ವ ಭಾವೀ ಸಿದ್ದತೆ ಗಳು ಭರ ದಿಂದ ಸಾಗಿವೆ.ಜಗ ತ್ತಿಗೆ ಶಾಂತಿ,ತ್ಯಾಗ ಮತ್ತು ಅಹಿಂ ಸೆಯ ಸಂದೇ ಶವನ್ನು ಸಾರಿದ ಭಗ ವಾನ್ ಬಾಹು ಬಲಿಯ ಪುಣ್ಯ ಕ್ಷೇತ್ರ ಗಳಲ್ಲಿ ಒಂ ದಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂ ಗಡಿ ತಾಲೂ ಕಿನ ವೇಣೂರು ರಾಜ್ಯದ ಪ್ರಸಿದ್ದ ಜೈನ ತೀರ್ಥ ಕ್ಷೇತ್ರ ಗಳಲ್ಲಿ ಒಂದು. ಕ್ರಿ.ಶ. 1604 ರಲ್ಲಿ ಈ ಪ್ರದೇಶ ದಲ್ಲಿ ಆಳ್ವಿಕೆ ನಡೆಸು ತ್ತಿದ್ದ 4ನೇ ಅಜಿಲರ ಅರಸ ರಾದ ತಿಮ್ಮಣ್ಣಾಜಿಲ ಅರಸರಿಂದ ಪ್ರತಿ ಷ್ಠಾಪಿತವಾದ 35 ಅಡಿ ಎತ್ತರದ ಏಕ ಶಿಲಾ ಗೋಮ ಟೇಶ್ವರ ಮಹಾಮೂರ್ತಿ ಅತೀ ವಿರಳವಾಗಿರುವ ಮಂದಸ್ಮಿತ ಮುಖಮುದ್ರೆಯನ್ನು ಹೊಂದಿದ್ದು, ಜಾತಿ-ಭೇಧವಿಲ್ಲದೆ ಎಲ್ಲಾ ಧರ್ಮಿಯರನ್ನೂ ತನ್ನೆಡೆ ಕೈ ಬೀಸಿ ಕರೆಯುತ್ತಿದೆ.ಎಲ್ಲ ಬಾಹುಬಲಿ ವಿಗ್ರಹಗಳೂ ಗುಡ್ಡ- ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದರೆ, ವೇಣೂರಿನ ಈ ಬಾಹುಬಲಿ ಮೂರ್ತಿ ಮಾ...

ಮಂಗಳೂರು ಟೈಲ್ಸ್..

Image
ಒಂದು ಕಾಲಕ್ಕೆ ಮಂಗಳೂರು ಹೆಂಚು ಇಲ್ಲಿನ ಜನರ ಜೀವನಾಡಿಯಾಗಿತ್ತು. ಬಡವರು ಮನೆ ಕಟ್ಟಲು ಮುಳಿಹುಲ್ಲನ್ನು ಆಶ್ರಯಿಸುತ್ತಿ ದ್ದರೆ, ಶ್ರೀಮಂತರು ಹೆಂಚನ್ನು ಬಳಸುತ್ತಿದ್ದರು.ಸ್ವಾತಂತ್ರಪೂರ್ವದಲ್ಲೇ ಅವಿಭಜಿತ ದಕ್ಷಿಣ ಕನ್ನಡ ಹೆಂಚು ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಇಲ್ಲಿನ ಹೆಂಚು ಗಳು ‘ಮಂಗಳೂರು ಹೆಂಚು’ ಎಂದೇ ಪ್ರಸಿದ್ಧಿ ಪಡೆದಿತ್ತು. ಬ್ರಿಟಿಷರು ಕೂಡ ಇಲ್ಲಿನ ಹೆಂಚಿಗೆ ತಲೆ ತೂಗಿದ್ದರು. ಯುರೋಪ್, ಆಫ್ರಿಕಾ ಖಂಡ ಗಳಿಗೆ ಹಾಗೂ ದೇಶಾ ದ್ಯಂತ ಇಲ್ಲಿಂದಲೇ ಹೆಂಚುಗಳು ರಫ್ತಾಗುತ್ತಿದ್ದವು. ನೂರಾರು ಕುಟುಂಬಗಳು ಈ ಉದ್ಯಮವನ್ನು ಆಶ್ರ ಯಿಸಿದ್ದವು. ಸಾವಿರಾರು ಕಾರ್ಮಿಕರ ಬದುಕನ್ನು ಇದು ಹಸನುಗೊಳಿಸಿತ್ತು.ಆದರೆ, ಬರಬರುತ್ತಾ ಹೆಂಚಿನ ಮನೆ, ಅಂಗಡಿಗಳು ಕಾಂಕ್ರಿಟ್ ಮಯವಾಗ ತೊಡಗಿತು. ಶ್ರೀಮಂತರು ಮಾತ್ರವಲ್ಲ ಮಧ್ಯಮ ವರ್ಗದ ಜನರೂ ಆರ್‌ಸಿಸಿ ಕಟ್ಟಡ ನಿರ್ಮಾಣ ಶುರುವಿಟ್ಟರು. ಹಾಗಾಗಿ ಇದೀಗ ನಗರ ಮಾತ್ರವಲ್ಲ ಗ್ರಾಮಾಂತರ ಪ್ರದೇಶಗಳಲ್ಲೂ ಆರ್‌ಸಿಸಿ ಮನೆಗಳನ್ನು ಕಾಣಬಹುದು. ಹೆಂಚಿನ ಮನೆ ನಿರ್ಮಾಣಕ್ಕೆ ಮುಂದಾ ದರೆ ಅಂತಹವರನ್ನು ತಾತ್ಸಾರದ ಭಾವನೆ ಯಿಂದ ನೋಡುವವರಿಗೂ ಇಂದಿನ ಕಾಲದಲ್ಲಿ ಕೊರತೆ ಇಲ್ಲ. ಹಾಗಾಗಿ ಈಗ ಎಲ್ಲೆಡೆ ಕಾಂಕ್ರಿಟ್ ಕಟ್ಟಡ ಗಳೇ ನಿರ್ಮಾಣ ವಾಗುತ್ತಿದೆ. ಇದರ ನೇರ ಪರಿಣಾಮ ಹೆಂಚು ಉದ್ಯಮದ ಮೇಲಾಗಿದೆ.ಸ್ವರ್ಣ ಯುಗ ದಲ್ಲಿದ್ದ ಮಂಗ ಳೂರು ಹೆಂಚಿನ ಸ್ಥಿತಿ ಇದೀಗ ಆದೋ ಗತಿಗೆ ಇಳಿಸಿದ್ದು, ಯಾರೂ ಕೇಳುವವರಿಲ್ಲದ ಸ್ಥಿತಿ ನಿರ್ಮ...