Posts

Showing posts with the label Mangalore History

ಪಡುಪಣಂಬೂರಿನಲ್ಲಿ ಭೋಳಾರ ಭೋಜರಾವ್‌ ನೇತೃತ್ವದಲ್ಲಿ ಉಪ್ಪಿನ ಸತ್ಯಾಗ್ರಹ

Image
ಮಂಗಳೂರಿನಲ್ಲಿ 1930ರ ಎ. 13ರಂದು ಮುಂಜಾನೆ ಉಪ್ಪು ತಯಾರಿಸಲು ಸಿದ್ಧರಾದ ಸತ್ಯಾಗ್ರಹಿಗಳ ಗುಂಪು ಬಂದರು ಪ್ರದೇಶಕ್ಕೆ ಹೊರಟಿತು. ಸತ್ಯಾಗ್ರಹಿಗಳು ಮೆರವಣಿಗೆಯಲ್ಲಿ ಹೋಗುತ್ತಿರುವಾಗ, ಪಿ. ಎಲ್‌. ಪುಣಿಚಿತ್ತಾಯರು ಬರೆದಿದ್ದ ಗೀತೆಯನ್ನು ಹಾಡುತ್ತಿದ್ದರು: ಉಪ್ಪಿನ ಕದನಕ್ಕೆ ಹೋರಾಡುವ ಜನರೆ ಉಪ್ಪಿಗೆ ಬೇಕಾಗಿ ಹೋರಾಡಿ ಭಟರೆ ಉಪ್ಪಿಗೂ ಗತಿ ಇಲ್ಲ. ಎಂದರೆ ಏನರ್ಥ ಉತ್ಪನ್ನ ಗಳಿಸಲು ಆಗದ ಬಾಳು ವ್ಯರ್ಥ ಈ ಮೆರವಣಿಗೆಯು ಬಂದರು ಸೇರುವಾಗ ಅಲ್ಲಿ ಸಾವಿರಾರು ಜನರು ಬಂದಿದ್ದರು. ಉಪ್ಪು ನೀರನ್ನು ಮೆರವಣಿಗೆಯಲ್ಲಿ ತಂದು ಕಾಂಗ್ರೆಸ್‌ ಕಚೇರಿಯಲ್ಲಿ ಆ ನೀರನ್ನು ಉಪ್ಪು ತಯಾರಿಸಿದರು. ಮಧ್ಯಾಹ್ನ ಪೊಲೀಸ್‌ ತಂಡದೊಂದಿಗೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಬಂದು ಅಲ್ಲಿ ತಯಾರಿಸಿದ ಉಪ್ಪನ್ನು ಅದಕ್ಕೆ ಉಪಯೋಗಿಸಿದ ಪಾತ್ರೆಯನ್ನು ಉಳಿಸಿ ಉಳಿದ ಕಟ್ಟಿಗೆಯನ್ನು ಒಯ್ದರು. ಅಂದು ಸಂಜೆ ಕೇಂದ್ರ ಮೈದಾನಿನಲ್ಲಿ ಆರ್‌. ಕೆ. ಪ್ರಭು ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿತು. ಉಪ್ಪನ್ನು ಏಲಂ ಮಾಡಲು ಆರಂಭಿಸಲಾಯಿತು. ಆಗ ಪೊಲೀಸರು ಬಂದು ಉಪ್ಪನ್ನು ಸೆಳೆದುಕೊಂಡರು. ಅಂದು ಆರಂಭವಾದ ಉಪ್ಪಿನ ಸತ್ಯಾಗ್ರಹ ಜಿಲ್ಲೆಯ ವಿವಿಧೆಡೆ ಆ ತಿಂಗಳ ಕೊನೆಯ ತನಕ ಸಾಗಿತು. ಪಾನ ನಿಷೇಧಕ್ಕೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಶೇಂದಿ, ಶರಾಬು ಅಂಗಡಿಗಳ ಎದುರು 1930ರಲ್ಲಿ ಪಿಕೆಟಿಂಗ್‌ ನಡೆಯಿತು. ಮೇ 5ನ್ನು ಮದ್ಯ ನಿಷೇಧ ದಿನವೆಂದು ಆಚರಿಸಲಾಯಿತು. ಆ ದಿನ ಮೆ...

"ನೆಲ್ಲಿತೀರ್ಥ" ಪವಿತ್ರ ಗುಹಾತೀರ್ಥದ ಸನ್ನಿಧಿ

Image
ತುಳುನಾಡಿನ ಪ್ರಾಚೀನ ದೇವಾಲಯಗಳಿಗೆಲ್ಲ ಒಂದು ಭವ್ಯ ಪರಂಪರೆಯಿದೆ. ಹಿಂದೆ ಈ ಪ್ರದೇಶವನ್ನು ಆಳಿದ್ದ ಆಳುಪ, ವಿಜಯನಗರ, ಕೆಳದಿ ಸಂಸ್ಥಾನಗಳಿಂದಲೂ, ಸ್ಥಳೀಯ ರಾಜವಂಶೀಯರಿಂದಲೂ ಆರಾಧಿಸಲ್ಪಡುತ್ತಿದ್ದ ಅನೇಕ ದೇವಾಲಯಗಳು ಇಲ್ಲಿವೆ. ದೇವಾಲಯಗಳ ವಿನಿಯೋಗಗಳು ಸಾಂಗವಾಗಿ ನಡೆಯಬೇಕೆಂಬ ಸದುದ್ದೇಶದಿಂದ, ಅಂದಿನ ಅರಸರು ಬಿಟ್ಟುಕೊಟ್ಟ ದತ್ತಿ ಶಾಸನಗಳ ಸಂಖ್ಯೆ ಅಪರಿಮಿತವಾಗಿದೆ. ಇಲ್ಲಿಯ ತುಂಡರಸರಲ್ಲಿ ಚೌಟರು ಸುಪ್ರಸಿದ್ಧರು.  ಇವರು ಮೂಲತಃ ಕರಾವಳಿಯ ಉಳ್ಳಾಲದವರಾಗಿದ್ದು, ಮುಂದೆ ಪುತ್ತಿಗೆ, ಮೂಡಬಿದಿರೆಗಳಲ್ಲಿ ಕೇಂದ್ರಸ್ಥಾನವನ್ನೇರ್ಪಡಿಸಿ ರಾಜ್ಯಭಾರ ಮಾಡುತ್ತಿದ್ದರು. ಇವರು ಸೋಮನಾಥ ದೇವರ ಭಕ್ತರಾಗಿದ್ದರು. ಆದಕಾರಣದಿಂದ ಇವರು ಆಳಿಕೊಂಡಿದ್ದ ಭಾಗದಲ್ಲಿ ಅನೇಕ ಸೋಮನಾಥ ದೇವಾಲಯಗಳಿವೆ. ಉಳ್ಳಾಲ, ಪುತ್ತಿಗೆ, ಅಮ್ಮೆಂಬಳ, ಪೆರ್ಮುದೆ, ಪೋರ್ಕೋಡಿ, ಗುರುಪುರ, ಇರಾ, ನೆಲ್ಲಿತೀರ್ಥ ಮೊದಲಾದ ಸೋಮನಾಥ ದೇವಾಲಯಗಳು ಇಲ್ಲಿವೆ. ಇವುಗಳಲ್ಲಿ ನೆಲ್ಲಿತೀರ್ಥವು ಪವಿತ್ರ ಗುಹಾತೀರ್ಥದ ಸನ್ನಿಧಿಯಲ್ಲಿದ್ದು ಅತಿಮಹಿಮಾನ್ವಿತವಾಗಿದೆ. ಪೂರ್ವಕಾಲದಲ್ಲಿ ಇದು ಜಾಬಾಲಿಮುನಿಯ ಸಿದ್ಧಾಶ್ರಮವಾಗಿತ್ತೆಂದು ಪುರಾಣೋಕ್ತಿಯಿದೆ. ಶ್ರ್‍ಈಕ್ಷೇತ್ರದಲ್ಲಿರುವ ಅರಸರ ಮಂಚ, ಅರಸುಕಟ್ಟೆಗಳು ಇಲ್ಲಿಗೆ ಚೌಟರಸರು ಆಗಾಗ ಭೇಟಿ ಕೊಡುತ್ತಿದ್ದರೆಂಬುದಕ್ಕೆ ಮೂಕಸಾಕ್ಷಿಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸವನ್ನು ಬರೆದಿರುವ ದಿ. ಗಣಪತಿರಾವ್ ಐ...

Mangalore’s First Car ' De Dion'

Image
Before the advent of automobiles, the horse-drawn coach was the chief means of transport for the aristocracy, including in Mangalore. The Highland Saldanha family was one such, which imported the first car into Mangalore in1906. Apart from, it also imported a driver for it from another province, Bombay, of British India. Luis Williams, the driver, was hired under two contracts written on 8 annas  (Rs. 50 paise of today) stamp papers, signed by the driver, with three witnesses to boot.   Both contracts set down similar terms and conditions, except that one signed in Bombay was drawn up by J M Saldanha ( apparently Joseph Manuel Saldanha (1886-1952), son of Stanislaus Saldanha (1817-1888) who lived in Codialbail. A journalist, Joseph was initially on the editorial staff of the Bombay Gazette, and later worked for The Statesman, Calcutta.) who perhaps recruited the driver in Bombay for his daijis in Mangalore and advanced Rs. 20 for rail fare and expenses during the jou...

ಪಾಣೆ ಮಂಗಳೂರು ಸೇತುವೆ

Image
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರ ನೇತ್ರಾವತಿ ನದಿಗೆ ಹಾಕಲಾದ ಪಾಣೆಮಂಗಳೂರು ಸೇತುವೆ ಇತಿಹಾಸ ಉಳ್ಳದ್ದು.   ದಿ ಹಾರ್ಸ್ ವೇ ಎಂಬ ಬ್ರಿಟಿಷ್ ಕಂಪೆನಿ ಈ  ಸೇತುವೆಯನ್ನು ನಿರ್ಮಾಣ ಮಾಡಿತ್ತು. 1914 ರಲ್ಲಿ ಇದರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು 1918 ರಲ್ಲಿ ಪೂರ್ಣಗೊಂಡಿತ್ತು.  ಭಾರತದಲ್ಲಿ ಉಕ್ಕು ಉತ್ಪಾದನೆ ಇಲ್ಲದ ಕಾರಣ ಇದಕ್ಕೆ ಬಳಸಿದ ಉಕ್ಕನ್ನು  ಇಂಗ್ಲೇಡಿನಿಂದ ಆಮದು ಮಾಡಲಾಗಿತ್ತು. ಸನಿಹದಲ್ಲೇ ಹೊಸ ಸೇತುವೆ ನಿರ್ಮಾಣ ಮಾಡಿದ್ದರಿಂದ 2002 ರಲ್ಲಿ ಈ ಸೇತುವೆ ಸಂಚಾರದಿಂದ ಮುಕ್ತವಾಗಿತ್ತು. ಇವತ್ತಿಗೂ ಗಟ್ಟಿಮುಟ್ಟಾಗಿರುವ ಸೇತುವೆಯ ಕಬ್ಬಿಣ ಕರಾವಳಿಯ ಬಿಸಿಲು, ಮಳೆ-ಗಾಳಿಗೆ ಮೈಯೊಡ್ಡಿದ್ದರೂ ತುಕ್ಕು ಹಿಡಿಯದೆ ಇರುವುದು ವಿಶೇಷವೇ ಸರಿ. ಒಂದು ಕಾಲದಲ್ಲಿ ಐತಿಹಾಸಿಕ ನಾಡಾಗಿ ಪ್ರಸಿದ್ದಿ ಪಡೆದುಕೊಂಡಿದ್ದ ಪಾಣೆಮಂಗಳೂರು ಆ ಬಳಿಕ ಇಲ್ಲಿನ ಬ್ರಿಟಿಷರ ಕಾಲದ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ಈ ಸೇತುವೆ ಮೇಲಿಂದ ಘನ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಇದರಿಂದಾಗಿ ಸಾರಿಗೆ ವಾಹನಗಳು ಸೇರಿದಂತೆ ಘನ ವಾಹನಗಳು ಪಾಣೆಮಂಗಳೂರು ಪೇಟೆಯೊಳಗೆ ಸಂಚರಿಸದೆ ರಾಷ್ಟ್ರೀಯ ಹೆದ್ದಾರಿ ಬಳಸಿ ಸಂಚರಿಸಲು ಪ್ರಾರಂಭಿಸಿತು. ಇದರಿಂದಾಗಿ ಪರ ಊರಿನ ಜನತೆ, ಚಿಲ್ಲರೆ ವ್ಯಾಪಾರಿಗಳು ಪಾಣೆಮಂಗಳೂರು  ಬರು ಬದಲು  ಬಿ ಸಿ ರೋಡು, ಬಂಟ್...

ಜೈನಕಾಶಿ ಮೂಡಬಿದ್ರೆ

Image
ಮಂಗಳೂರು-ಕಾರ್ಕಳ ರಸ್ತೆಯಲ್ಲಿ ಮಂಗಳೂರಿನಿಂದ 35 ಕಿಮೀ ದೂರದಲ್ಲಿರುವ ಚಿಕ್ಕ ಪಟ್ಟಣ ಮೂಡಬಿದರೆ ಜೈನಕಾಶಿ ಎಂದೇ ಖ್ಯಾತವಾಗಿದೆ. 1 7ನೆಯ ಶತಮಾನದಲ್ಲಿ ಮೂಡಬಿದರೆ  ಪುತ್ತಿಗೆಯ ಚೌಟರಸರ ರಾಜಧಾನಿಯಾಗಿ ಮೆರೆದಿತ್ತು, ಪೋರ್ಚುಗೀಸರ ವಿರುದ್ದ ಹೋರಾಡಿದ ವೀರ ಮಹಿಳೆ  ಉಳ್ಳಾಲದ ರಾಣಿ ಅಬ್ಬಕ್ಕ ಕೂಡ ಇದೇ ಊರಿನಲ್ಲಿ ಹುಟ್ಟಿದ್ದಳು. ೧೯೯೭ರಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ವಿಭಾಗಿಸುವ ಮುನ್ನ ಕಾರ್ಕಳ ತಾಲೂಕಿಗೆ ಸೇರಿದ್ದ ಮೂಡುಬಿದಿರೆಯು ಈಗ ಮಂಗಳೂರಿನ ಭಾಗವಾಗಿದೆ. ಮೂಡುಬಿದಿರೆಯು ಬಹಳ ಹಿಂದಿನಿಂದಲೂ ವ್ಯಾಪಾರ ವಾಣಿಜ್ಯದಲ್ಲಿ ಹೆಸರುವಾಸಿಯಾಗಿದ್ದ ಪಟ್ಟಣ. ಇಲ್ಲಿನ ವ್ಯಾಪಾರಿಗಳು ದೇಶ-ವಿದೇಶಗಳ ವಿವಿಧ ಸ್ಥಳಗಳ ವ್ಯಾಪಾರಿಗಳೊಂದಿಗೆ ವ್ಯವಹಾರ ಸಂಬಂಧ ಇಟ್ಟುಕೊಂಡಿದ್ದರೆಂದು ತಿಳಿದಿದೆ. ಇದಕ್ಕೆ ಸಣ್ಣ ಉದಾಹರಣೆಯಾಗಿ ಸಾವಿರ ಕಂಭದ ಬಸದಿಯ ಗೋಡೆಯ ಮೇಲೆ ಕೆತ್ತಲಾದ ಡ್ರಾಗನ್ ಪ್ರಾಣಿಯ ಉಬ್ಬು ಚಿತ್ರವನ್ನು ಗಮನಿಸಬಹುದು. ಆ ಕಾಲದಲ್ಲೇ ವ್ಯಾಪಾರಿಗಳು ಚೀನಾದೊಂದಿಗೆ ವ್ಯಾಪಾರ ಸಂಬಂಧವಿಟ್ಟುಕೊಂಡಿದ್ದರೆಂದು ಇದರಿಂದ ತಿಳಿಯುತ್ತದೆ. ಸಾವಿರ ಕಂಬದ ಬಸದಿ ಫಲ್ಗುಣಿ ನದಿಯ ದಂಡೆಯ ಮೇಲಿರುವ ಮೂಡಬಿದರೆಯಲ್ಲಿ 18 ಬಸದಿಗಳು ಹಲವಾರು ದೇವಾಲಯಗಳಿವೆ. ಈ ಪೈಕಿ ಸಾವಿರ ಕಂಬಗಳ ಬಸದಿ ಎಂದು ಖ್ಯಾತವಾಗಿರುವ ತ್ರಿಭುವನತಿಲಕ ಚೂಡಾಮಣಿ ಚಂದ್ರಪ್ರಭಾಸ್ವಾಮಿಯ ಮಹಾಚೈತ್ಯಾಲಯ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವ...

ಸುಲ್ತಾನ್ ಬತ್ತೇರಿ

Image
ಸುಲ್ತಾನ್ ಬತ್ತೇರಿ 1940ರಲ್ಲಿ ಕರಾವಳಿ ನಗರ ಮಂಗಳೂರು ಹಲವಾರು ಐತಿಹಾಸಿಕ ಪ್ರದೇಶಗಳಿಗೆ ಹೆಸರು ವಾಸಿಯಾಗಿದೆ. ಹಾಗೂ ಯಾತ್ರಿಕರ ಪ್ರವಾಸಿ ತಾಣವೂ ಹೌದು. ಆನಮೇಕ ರಾಜ ಮಹರಾಜರು ಈ ಪ್ರದೇಶದ ಮೇಲೆ ತಮ್ಮ ಅಧಿಪತ್ಯವನ್ನು ಸ್ಥಾಪಿಸಿದ್ದರು. ಇದರಲ್ಲಿ ಮಂಗಳೂರಿನ ಬೋಳುರಿನ ಸುಲ್ತಾನ್ ಬತ್ತೇರಿ ಒಂದು. ಬ್ರಿಟಿಷ್‌ ನೌಕೆಗಳು ಗುರುಪುರ ನದಿಯನ್ನು ಪ್ರವೇಶಿಸುವುದನ್ನು ತಡೆಗಟ್ಟಲು, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಹೋರಾಟಗಾರ ಮೈಸೂರು ಹುಲಿ ಟಿಪ್ಪುಸುಲ್ತಾನನು 1784 ರಲ್ಲಿ ಇದನ್ನು ನಿರ್ಮಿಸಿದನು. ಐತಿಹಾಸಿಕವಾಗಿ ಮಹತ್ವವಾಗಿರುವ ಈ ರಾಷ್ಟ್ರೀಯ ಸ್ಮಾರಕವು ಇತ್ತೀಚಿಗೆ ನವೀಕರಣಗೊಂಡಿದ್ದು, ಸ್ವಾತಂತ್ರ್ಯ ಹೋರಾಟದ ದಿವ್ಯ ಕುರುಹಾಗಿ ಉಳಿದಿದೆ. ಈ ಕೋಟೆಯನ್ನು ಕಪ್ಪು ಕಲ್ಲಿನಿಂದ ನಿರ್ಮಿಸಲಾಗಿದೆ. ಇದು ಒಂದು ಚಿಕ್ಕ ಕಾವಲು ಗೋಪುರ ಮಾದರಿಯ ಕೋಟೆಯಾಗಿದ್ದರೂ ಕೋಟೆಯ ಸುತ್ತಮುತ್ತ ಫಿರಂಗಿಗಳನ್ನು ಸ್ಥಾಪಿಸಲಾಗಿದೆ. ಮತ್ತು ವೈರಿಗಳ ಚಲನವಲನಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ  ರಚಿತವಾಗಿದೆ. ಈ ಕೋಟೆಯ ಅಡಿಭಾಗದಲ್ಲಿ ಸೈನಿಕರ ವಿಶ್ರಾಂತಿ ಕೋಣೆ ಇದೆ. ಮತ್ತು ಸುರಂಗ ಮಾರ್ಗವೂ ಇದೆ ಆದರೆ ಈಗ  ಸಾರ್ವಜನಿಕರಿಗೆ ಇದನ್ನು ನಿರ್ಬಂಧಿಸಲಾಗಿದೆ. ರಾಷ್ಟ್ರಿಯ ಸ್ಮಾರಕವಾಗಿ ಇದು ಘೋಷಣೆ ಯಾದ್ದರಿಂದ ಕೇಂದ್ರ ಪುರತತ್ವ ಇಲಾಖೆ ಇದರ ಮೇಲುಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.  ಸುಲ್ತಾನ್ ಬತ್ತೇರಿ ಸೂರ್ಯಾಸ್ತದ ವಿಹಂಗ...

ಮಂಗಳೂರು ಟೈಲ್ಸ್..

Image
ಒಂದು ಕಾಲಕ್ಕೆ ಮಂಗಳೂರು ಹೆಂಚು ಇಲ್ಲಿನ ಜನರ ಜೀವನಾಡಿಯಾಗಿತ್ತು. ಬಡವರು ಮನೆ ಕಟ್ಟಲು ಮುಳಿಹುಲ್ಲನ್ನು ಆಶ್ರಯಿಸುತ್ತಿ ದ್ದರೆ, ಶ್ರೀಮಂತರು ಹೆಂಚನ್ನು ಬಳಸುತ್ತಿದ್ದರು.ಸ್ವಾತಂತ್ರಪೂರ್ವದಲ್ಲೇ ಅವಿಭಜಿತ ದಕ್ಷಿಣ ಕನ್ನಡ ಹೆಂಚು ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಇಲ್ಲಿನ ಹೆಂಚು ಗಳು ‘ಮಂಗಳೂರು ಹೆಂಚು’ ಎಂದೇ ಪ್ರಸಿದ್ಧಿ ಪಡೆದಿತ್ತು. ಬ್ರಿಟಿಷರು ಕೂಡ ಇಲ್ಲಿನ ಹೆಂಚಿಗೆ ತಲೆ ತೂಗಿದ್ದರು. ಯುರೋಪ್, ಆಫ್ರಿಕಾ ಖಂಡ ಗಳಿಗೆ ಹಾಗೂ ದೇಶಾ ದ್ಯಂತ ಇಲ್ಲಿಂದಲೇ ಹೆಂಚುಗಳು ರಫ್ತಾಗುತ್ತಿದ್ದವು. ನೂರಾರು ಕುಟುಂಬಗಳು ಈ ಉದ್ಯಮವನ್ನು ಆಶ್ರ ಯಿಸಿದ್ದವು. ಸಾವಿರಾರು ಕಾರ್ಮಿಕರ ಬದುಕನ್ನು ಇದು ಹಸನುಗೊಳಿಸಿತ್ತು.ಆದರೆ, ಬರಬರುತ್ತಾ ಹೆಂಚಿನ ಮನೆ, ಅಂಗಡಿಗಳು ಕಾಂಕ್ರಿಟ್ ಮಯವಾಗ ತೊಡಗಿತು. ಶ್ರೀಮಂತರು ಮಾತ್ರವಲ್ಲ ಮಧ್ಯಮ ವರ್ಗದ ಜನರೂ ಆರ್‌ಸಿಸಿ ಕಟ್ಟಡ ನಿರ್ಮಾಣ ಶುರುವಿಟ್ಟರು. ಹಾಗಾಗಿ ಇದೀಗ ನಗರ ಮಾತ್ರವಲ್ಲ ಗ್ರಾಮಾಂತರ ಪ್ರದೇಶಗಳಲ್ಲೂ ಆರ್‌ಸಿಸಿ ಮನೆಗಳನ್ನು ಕಾಣಬಹುದು. ಹೆಂಚಿನ ಮನೆ ನಿರ್ಮಾಣಕ್ಕೆ ಮುಂದಾ ದರೆ ಅಂತಹವರನ್ನು ತಾತ್ಸಾರದ ಭಾವನೆ ಯಿಂದ ನೋಡುವವರಿಗೂ ಇಂದಿನ ಕಾಲದಲ್ಲಿ ಕೊರತೆ ಇಲ್ಲ. ಹಾಗಾಗಿ ಈಗ ಎಲ್ಲೆಡೆ ಕಾಂಕ್ರಿಟ್ ಕಟ್ಟಡ ಗಳೇ ನಿರ್ಮಾಣ ವಾಗುತ್ತಿದೆ. ಇದರ ನೇರ ಪರಿಣಾಮ ಹೆಂಚು ಉದ್ಯಮದ ಮೇಲಾಗಿದೆ.ಸ್ವರ್ಣ ಯುಗ ದಲ್ಲಿದ್ದ ಮಂಗ ಳೂರು ಹೆಂಚಿನ ಸ್ಥಿತಿ ಇದೀಗ ಆದೋ ಗತಿಗೆ ಇಳಿಸಿದ್ದು, ಯಾರೂ ಕೇಳುವವರಿಲ್ಲದ ಸ್ಥಿತಿ ನಿರ್ಮ...

ಪರಶುರಾಮ ಸೃಷ್ಟಿ ಮಂಗಳೂರು...

Image
'ಮಂಗಳೂರು' ಹೆಸರೇ ಸೂಚಿಸುವಂತೆ ಮಂಗಳಾ ದೇವಿಯಿಂದ ತನ್ನ ಹೆಸರನ್ನು ಪಡೆದುಕೊಂಡಿದೆ.ನೆರೆಯ ಕೇರಳಿಗರಿಗೆ ಇಂದಿಗೂ ಇದು ಮಂಗಳಾಪುರ.ಇದರ ಹಿನ್ನೆಲೆ ಗಮನಿಸಿದರೆ ಇದು ಹೌದು ಕೂಡ.ಸ್ಥಳೀಯ ದೇವತೆಯಾದ ಮಂಗಳಾ ದೇವಿಯಿಂದ ಮಂಗಳೂರು ತನ್ನ ಹೆಸರನ್ನು ಪಡೆದುಕೊಂಡಿದೆ.ಮತ್ಸ್ಯೇಂದ್ರ ನಾಥನೆಂಬ ನಾಥ್ ಪಂಥದ ಸಂತ, ಪೆರುಮಳಾದೇವಿ ಎಂಬ ಕೇರಳದ ರಾಜಕುಮಾರಿಯ ಜೊತೆ ಇಲ್ಲಿಗೆ ಬಂದಿದ್ದ. ಅವನು ರಾಜಕುಮಾರಿಯನ್ನು ತನ್ನ ಪಂಥಕ್ಕೆ ಪರಿವರ್ತಿಸಿಕೊಂಡು "ಮಂಗಳಾದೇವಿ" ಎಂದು ಮರುನಾಮಕರಣ ಮಾಡಿದನು. ಸ್ವಲ್ಪ ಸಮಯದ ಅನಾರೋಗ್ಯದಿಂದ ಮಂಗಳಾದೇವಿಯು ನಿಧನ ಹೊಂದಿದ್ದರಿಂದ ಅವರು ತಮ್ಮ ಪ್ರಯಾಣವನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಅವಳ ಹೆಸರಿನಲ್ಲಿ ಬೋಳಾರದಲ್ಲಿ ಒಂದು ದೇವಸ್ಥಾನವನ್ನು ನಿರ್ಮಿಸಲಾಯಿತು.ಇದುವೇ ಇತಿಹಾಸ ಪ್ರಸಿದ್ದ ಮಂಗಳಾ ದೇವಿ ದೇವಸ್ಥಾನ. ಅದು ನಂತರ ಕ್ರಿ.ಶ.968 ರಲ್ಲಿ ಅಲೂಪ ದೊರೆ ಕುಂದ ವರ್ಮನಿಂದ ಜೀರ್ಣೋ ದ್ಧಾರಕ್ಕೆ ಒಳಪಟ್ಟಿತು.ಈ ನಗರದ ಹಲವು ಪುರಾತನ ಉಲ್ಲೇಖಗಳಲ್ಲಿ ಒಂದನ್ನು ಪಾಂಡ್ಯ ರಾಜ ಚೆಟ್ಟಿಯನ್ ನೀಡಿದ್ದಾನೆ. ಅವನು ಕ್ರಿ.ಶ.719 ರಲ್ಲಿ ಇದನ್ನು ಮಂಗಲಾಪುರಂ ಎಂದು ಕರೆದಿದ್ದ. 11 ನೇ ಶತಮಾನದ ಅರಬ್ಬಿ ಪ್ರಯಾಣಿಕ ಇಬ್ನ ಬತೂತ ಮಂಗಳೂರನ್ನು ಮಂಜರೂರ್ ಎಂದು ಉಲ್ಲೇಖಿಸಿದ್ದಾನೆ.ಅತೀ ಸಂಪತ್ಭರಿತ ಪ್ರದೇಶವಾದ ಇದು ಕದಂಬರು, ಆಳುಪರು,ವಿಜಯನಗರದ ಅರಸರು,ಹೈದರಾಲಿ-ಟಿಪ್ಪು ಸುಲ್ತಾನರು ಆಳ್ವಿಕೆಯಲ್ಲಿತ್ತು....