Posts

Showing posts with the label Nitk Surathkal

ಮಂಗಳೂರಿನ ನಿಜವಾದ ರೂವಾರಿ ಯು.ಶ್ರೀನಿವಾಸ ಮಲ್ಯ

Image
ಉಳ್ಳಾಲ ಶ್ರೀನಿವಾಸ ಮಲ್ಯ ಈ ಹೆಸರು ಮಂಗಳೂರಿನ ಇತಿಹಾಸದ ಪುಟಗಳಲ್ಲಿ ಇಂದಿಗೂ ಅಮರ,ಅವರು ಆ ಕಾಲದಲ್ಲಿ ಮಂಗಳೂರಿನ ಕನಸನ್ನು ಕಟ್ಟಿರದಿದ್ದರೆ ಬಹುಷ ನಾವು ಇಂದು ಕಾಣುವ  ಭವ್ಯ ಮಂಗಳೂರನ್ನು ಊಹಿಸಲಿ ಆಸಾಧ್ಯ. ಸದ್ದುಗದ್ದಲ ಇಲ್ಲದೆ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ ಕೊಡುಗೆ ಅನನ್ಯ. ಪ್ರಸಕ್ತ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿ ಚಿಂತನೆಯ ಮಟ್ಟಿಗೆ ಯು.ಎಸ್. ಮಲ್ಯರು ಪ್ರಾತಃಸ್ಮರಣೀಯರು.  ಅಸಾಧಾರಣ ಬುದ್ಧಿವಂತಿಕೆ, ವ್ಯವಹಾರ ಕುಶಲತೆ ಹೊಂದಿರುವ ನಮ್ಮ ಕರಾವಳಿಯ ಕೊಂಕಣ ಸಾರಸತ್ವರು ಮತ್ತು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ಈ ನೆಲದ ವಿಭಿನ್ನ ರಂಗಗಳಿಗೆ ಅಸಂಖ್ಯ ಮಹನೀಯರನ್ನು ನೀಡಿದೆ. ದೇಶಭಕ್ತ ಕಾರ್ನಾಡ್ ಸದಾಶಿವರಾಯರು, ಸಾಮಾಜಿಕ ಪರಿವರ್ತನೆಯ ಹರಿಕಾರ ಕುದ್ಮುಲ್ ರಂಗರಾಯರು, ಬ್ಯಾಂಕಿಂಗ್ ಆಂದೋಲನದ ರೂವಾರಿಗಳಲ್ಲೊಬ್ಬರಾದ ಅಮ್ಮೆಂಬಳ ಸುಬ್ಬರಾಯರು, ರಾಷ್ಟ್ರಕವಿ ಎನಿಸಿದ ಗೋವಿಂದ ಪೈಗಳು… ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಉಳ್ಳಾಲ ಶ್ರೀನಿವಾಸ ಮಲ್ಯ ಕೂಡಾ ಗೌಡ ಸಾರಸ್ವತ ಬ್ರಾಹ್ಮಣ ಕುಟುಂಬದಿಂದ ಬಂದವರೇ. ಶ್ರೀನಿವಾಸ ಮಲ್ಯರು 1902 ಇಸವಿ ನವಂಬರ 21ರಂದು ಜಿಲ್ಲೆಯ ಹೆಸರಾಂತ ಉಳ್ಳಾಲ ಮಲ್ಯ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಶ್ರೀ ಉಳ್ಳಾಲ ಮಂಜುನಾಥ ಮಲ್ಯ ಮತ್ತು ತಾಯಿ ಸರಸ್ವತಿ ಯಾನೆ ರುಕ್ಮಾಬಾಯಿ. ಹಿರಿಯ ಅಣ್ಣ ಮಾಧವ ಮಲ್ಯ, ಇನ್ನೊಬ್ಬ ತಮ್ಮ ಜಿಲ್ಲೆಯ ಹೆಸರಾಂತ ಸಾಮಾಜಿಕ ...