Posts

Showing posts with the label Tulunada Temple History

"ನೆಲ್ಲಿತೀರ್ಥ" ಪವಿತ್ರ ಗುಹಾತೀರ್ಥದ ಸನ್ನಿಧಿ

Image
ತುಳುನಾಡಿನ ಪ್ರಾಚೀನ ದೇವಾಲಯಗಳಿಗೆಲ್ಲ ಒಂದು ಭವ್ಯ ಪರಂಪರೆಯಿದೆ. ಹಿಂದೆ ಈ ಪ್ರದೇಶವನ್ನು ಆಳಿದ್ದ ಆಳುಪ, ವಿಜಯನಗರ, ಕೆಳದಿ ಸಂಸ್ಥಾನಗಳಿಂದಲೂ, ಸ್ಥಳೀಯ ರಾಜವಂಶೀಯರಿಂದಲೂ ಆರಾಧಿಸಲ್ಪಡುತ್ತಿದ್ದ ಅನೇಕ ದೇವಾಲಯಗಳು ಇಲ್ಲಿವೆ. ದೇವಾಲಯಗಳ ವಿನಿಯೋಗಗಳು ಸಾಂಗವಾಗಿ ನಡೆಯಬೇಕೆಂಬ ಸದುದ್ದೇಶದಿಂದ, ಅಂದಿನ ಅರಸರು ಬಿಟ್ಟುಕೊಟ್ಟ ದತ್ತಿ ಶಾಸನಗಳ ಸಂಖ್ಯೆ ಅಪರಿಮಿತವಾಗಿದೆ. ಇಲ್ಲಿಯ ತುಂಡರಸರಲ್ಲಿ ಚೌಟರು ಸುಪ್ರಸಿದ್ಧರು.  ಇವರು ಮೂಲತಃ ಕರಾವಳಿಯ ಉಳ್ಳಾಲದವರಾಗಿದ್ದು, ಮುಂದೆ ಪುತ್ತಿಗೆ, ಮೂಡಬಿದಿರೆಗಳಲ್ಲಿ ಕೇಂದ್ರಸ್ಥಾನವನ್ನೇರ್ಪಡಿಸಿ ರಾಜ್ಯಭಾರ ಮಾಡುತ್ತಿದ್ದರು. ಇವರು ಸೋಮನಾಥ ದೇವರ ಭಕ್ತರಾಗಿದ್ದರು. ಆದಕಾರಣದಿಂದ ಇವರು ಆಳಿಕೊಂಡಿದ್ದ ಭಾಗದಲ್ಲಿ ಅನೇಕ ಸೋಮನಾಥ ದೇವಾಲಯಗಳಿವೆ. ಉಳ್ಳಾಲ, ಪುತ್ತಿಗೆ, ಅಮ್ಮೆಂಬಳ, ಪೆರ್ಮುದೆ, ಪೋರ್ಕೋಡಿ, ಗುರುಪುರ, ಇರಾ, ನೆಲ್ಲಿತೀರ್ಥ ಮೊದಲಾದ ಸೋಮನಾಥ ದೇವಾಲಯಗಳು ಇಲ್ಲಿವೆ. ಇವುಗಳಲ್ಲಿ ನೆಲ್ಲಿತೀರ್ಥವು ಪವಿತ್ರ ಗುಹಾತೀರ್ಥದ ಸನ್ನಿಧಿಯಲ್ಲಿದ್ದು ಅತಿಮಹಿಮಾನ್ವಿತವಾಗಿದೆ. ಪೂರ್ವಕಾಲದಲ್ಲಿ ಇದು ಜಾಬಾಲಿಮುನಿಯ ಸಿದ್ಧಾಶ್ರಮವಾಗಿತ್ತೆಂದು ಪುರಾಣೋಕ್ತಿಯಿದೆ. ಶ್ರ್‍ಈಕ್ಷೇತ್ರದಲ್ಲಿರುವ ಅರಸರ ಮಂಚ, ಅರಸುಕಟ್ಟೆಗಳು ಇಲ್ಲಿಗೆ ಚೌಟರಸರು ಆಗಾಗ ಭೇಟಿ ಕೊಡುತ್ತಿದ್ದರೆಂಬುದಕ್ಕೆ ಮೂಕಸಾಕ್ಷಿಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸವನ್ನು ಬರೆದಿರುವ ದಿ. ಗಣಪತಿರಾವ್ ಐ...