Posts

Showing posts with the label Ullal King

ಮಂಗಳೂರಿನ ನಿಜವಾದ ರೂವಾರಿ ಯು.ಶ್ರೀನಿವಾಸ ಮಲ್ಯ

Image
ಉಳ್ಳಾಲ ಶ್ರೀನಿವಾಸ ಮಲ್ಯ ಈ ಹೆಸರು ಮಂಗಳೂರಿನ ಇತಿಹಾಸದ ಪುಟಗಳಲ್ಲಿ ಇಂದಿಗೂ ಅಮರ,ಅವರು ಆ ಕಾಲದಲ್ಲಿ ಮಂಗಳೂರಿನ ಕನಸನ್ನು ಕಟ್ಟಿರದಿದ್ದರೆ ಬಹುಷ ನಾವು ಇಂದು ಕಾಣುವ  ಭವ್ಯ ಮಂಗಳೂರನ್ನು ಊಹಿಸಲಿ ಆಸಾಧ್ಯ. ಸದ್ದುಗದ್ದಲ ಇಲ್ಲದೆ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ ಕೊಡುಗೆ ಅನನ್ಯ. ಪ್ರಸಕ್ತ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿ ಚಿಂತನೆಯ ಮಟ್ಟಿಗೆ ಯು.ಎಸ್. ಮಲ್ಯರು ಪ್ರಾತಃಸ್ಮರಣೀಯರು.  ಅಸಾಧಾರಣ ಬುದ್ಧಿವಂತಿಕೆ, ವ್ಯವಹಾರ ಕುಶಲತೆ ಹೊಂದಿರುವ ನಮ್ಮ ಕರಾವಳಿಯ ಕೊಂಕಣ ಸಾರಸತ್ವರು ಮತ್ತು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ಈ ನೆಲದ ವಿಭಿನ್ನ ರಂಗಗಳಿಗೆ ಅಸಂಖ್ಯ ಮಹನೀಯರನ್ನು ನೀಡಿದೆ. ದೇಶಭಕ್ತ ಕಾರ್ನಾಡ್ ಸದಾಶಿವರಾಯರು, ಸಾಮಾಜಿಕ ಪರಿವರ್ತನೆಯ ಹರಿಕಾರ ಕುದ್ಮುಲ್ ರಂಗರಾಯರು, ಬ್ಯಾಂಕಿಂಗ್ ಆಂದೋಲನದ ರೂವಾರಿಗಳಲ್ಲೊಬ್ಬರಾದ ಅಮ್ಮೆಂಬಳ ಸುಬ್ಬರಾಯರು, ರಾಷ್ಟ್ರಕವಿ ಎನಿಸಿದ ಗೋವಿಂದ ಪೈಗಳು… ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಉಳ್ಳಾಲ ಶ್ರೀನಿವಾಸ ಮಲ್ಯ ಕೂಡಾ ಗೌಡ ಸಾರಸ್ವತ ಬ್ರಾಹ್ಮಣ ಕುಟುಂಬದಿಂದ ಬಂದವರೇ. ಶ್ರೀನಿವಾಸ ಮಲ್ಯರು 1902 ಇಸವಿ ನವಂಬರ 21ರಂದು ಜಿಲ್ಲೆಯ ಹೆಸರಾಂತ ಉಳ್ಳಾಲ ಮಲ್ಯ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಶ್ರೀ ಉಳ್ಳಾಲ ಮಂಜುನಾಥ ಮಲ್ಯ ಮತ್ತು ತಾಯಿ ಸರಸ್ವತಿ ಯಾನೆ ರುಕ್ಮಾಬಾಯಿ. ಹಿರಿಯ ಅಣ್ಣ ಮಾಧವ ಮಲ್ಯ, ಇನ್ನೊಬ್ಬ ತಮ್ಮ ಜಿಲ್ಲೆಯ ಹೆಸರಾಂತ ಸಾಮಾಜಿಕ ...

ಬಿ.ಎಂ. ಇದಿನಬ್ಬ: ಒಂದು ನೆನಪು

Image
ಗಾಂಧಿ ಟೋಪಿ,ಶುಭ್ರ ಖಾದಿ ಬಟ್ಟೆ,ಬಿಳಿ ಗಡ್ಡ, ಕನ್ನಡಕ, ಕಂಚಿನ ಕಂಠ. ಅದರಲ್ಲಿ ಹೊರಹೊಮ್ಮಿದ ಕಯ್ಯರ ಕಿಂಞಣ್ಣ ರೈ ಅವರ ‘‘ಐಕ್ಯವೊಂದೇ ಮಂತ್ರ...’’ ಹಾಡು. ಇಷ್ಟು ವಿವರಿಸಿದರೆ ಸಾಕು, ಅವಿಭಾಜಿತ ದಕ್ಷಿಣ ಕನ್ನಡ ಕರಾವಳಿಯಲ್ಲಿ ಯಾರನ್ನೂ ಕೇಳಿದರು ಹೇಳುತ್ತಾರೆ ‘‘ಅವರು ಇದಿನಬ್ಬ’’. ಬಿ. ಎಂ.ಇದಿನಬ್ಬ ಕನ್ನಡ ನಾಡನ್ನು ಅಗಲಿ ವರ್ಷಗಳೇ ಸಂದಿವೆ. ಅವರ ಕಂಚಿನ ಕಂಠದ ಗಮಕ ಹಾಡುಗಳಿಲ್ಲದೆ ಕರಾವಳಿಯ ವೇದಿಕೆಗಳು ಬಣಗುಟ್ಟುತ್ತಿವೆ. ಇದಿನಬ್ಬರ ಹೆಸರೇ ಸದಾ ಕೋಮು ದಳ್ಳುರಿಯಲ್ಲಿ ಬೆಂದ ಕರಾವಳಿಯ ಕೋಮುಸೌಹಾರ್ದಕ್ಕೆ ಪರ್ಯಾಯ ಪದ. ಬಹುಷ ಸೌಹಾರ್ದದ ಕುರಿತಂತೆ ಮಾತನಾಡಿದ್ದು ಬಹಳಷ್ಟು ಕಡಿಮೆ.ಬದಲಿಗೆ ಅದನ್ನು ಬದುಕಿನಲ್ಲಿ ತೋರಿಸಿಕೊಟ್ಟವರು. ಒಬ್ಬ ಮುಸ್ಲಿಮನಾಗಿದ್ದರೂ ಇದಿನಬ್ಬ ಎಂದಿಗೂ ಕೇವಲ ಮುಸ್ಲಿಮರ ನಾಯಕರಾಗಿರಲಿಲ್ಲ.ಅವರು ಎಂದೆಂದಿಗೂ ಕನ್ನಡದ ಕಟ್ಟಾಳು. ಕನ್ನಡತನ, ಸೌಹಾರ್ದ, ಸಹಕಾರ, ಸರಳತೆ, ನೇರನುಡಿ, ಪ್ರಾಮಾಣಿಕ ಬದುಕು...ಇವು ಇದಿನಬ್ಬ ನಮ್ಮ ನಡುವೆ ಊರಿ ಹೋದ ಹೆಜ್ಜೆಗಳು....ಆ ಹೆಜ್ಜೆಗಳ ಹಿಂದೆ ಹೆಜ್ಜೆಗಳನ್ನಿಟ್ಟು ಸಾಗಿದರೂ ಸಾಕು...ಕರಾವಳಿ ಮಾತ್ರವಲ್ಲ, ಇಡೀ ಕರ್ನಾಟಕವೇ ಸೌಹಾರ್ದದ ಬೀಡಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದಿನಬ್ಬರವರ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಿದರೆ, ಇದಿನಬ್ಬರ ತಂದೆ ತೀರಿದಾಗ ಅವರು ಹತ್ತು ವರ್ಷದ ಕೂಸು. ತಾಯಿ ಗರ್ಭವತಿ. ಇದ್ದುದರಲ್ಲಿ ಇದಿನಬ್ಬರೇ ದೊಡ್ಡ ಮಗ.ತಂದೆ ನಿಧನರಾಗುವ ಮೊದಲು ತನ್ನ...