ಪೋಸ್ಟ್‌ಗಳು

mangalore ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಭಾರತದ ಸಂವಿಧಾನ ರಚನೆಯಲ್ಲಿ ಮಂಗಳೂರಿನ ಧರ್ಮಗುರು..!

ಇಮೇಜ್
 Father Jerome D'Souza, SJ (1897–1977) was an eminent Indian Jesuit priest, educationist, diplomat, and statesman. He is best remembered as one of the key architects of the Indian Constitution, representing the Christian community and the Madras province in the Constituent Assembly of India. ಹಲವು ಜಾತಿ , ಧರ್ಮ, ಬಣ್ಣಗಳ ವೈವಿಧ್ಯಗಳಲ್ಲಿ ಏಕತೆ ಇರುವ ಭಾರತದ ಭದ್ರ ಬುನಾದಿ ಇರುವುದು ಸಂವಿಧಾನದಲ್ಲಿ. ಡಾ. ಬಿ ಆರ್ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಈ ಸಂವಿಧಾನ ರೂಪಿಸುವಲ್ಲಿ ದೇಶದ ಅನೇಕ ಮಹನೀಯರ ಕೊಡೆಗೆ ಅತ್ಯಮೂಲ್ಯವಾದುದು. ಅದರಲ್ಲಿ ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯಿಂದ ನೇಮಕಗೊಂಡ ಐವರು ಮಹನೀಯರಲ್ಲಿ ಓರ್ವ ಧರ್ಮಗುರುವು ಸೇರಿದ್ದಾರೆ. ಅವರೇ  ವಂದನೀಯ ಫಾದರ್ ಜೆರೋಮ್ ಡಿ ಸೋಜಾ. ಫಾದರ್ ಜೆರೋಮ್ ಡಿ ಸೋಜಾ ಭಾರತದ ಹೆಮ್ಮೆಯ ಶಿಕ್ಷಣ ತಜ್ಞರು, ರಾಜತಾಂತ್ರಿಕರು ಮತ್ತು ಭಾರತ ಸಂವಿಧಾನ ರಚನಾ ಸಭೆಯ (Constituent Assembly) ಪ್ರಮುಖ ಸದಸ್ಯರಾಗಿದ್ದರು. ಭಾರತದ ಇತಿಹಾಸದಲ್ಲಿ ಕರಾವಳಿ ಕರ್ನಾಟಕ ಹಾಗೂ ಕ್ರಿಶ್ಚಿಯನ್ ಸಮುದಾಯದಿಂದ ದೇಶದ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡ ಅಪರೂಪದ ವ್ಯಕ್ತಿತ್ವ ಅವರದ್ದಾಗಿತ್ತು. ಫಾದರ್ ಜೆರೋಮ್ ಡಿಸೋಜಾ ಅವರು 1897ರ ಆಗಸ್ಟ್ 6ರಂದು ಮಂಗಳೂರಿನಲ್ಲಿ ಮುಲ್ಕಿಯ ಚಿತ್ರಾಪುವಿನ ಬಡ ಕುಟುಂಬದಲ್ಲಿ ಜನಿಸಿದರು. ಅವರ ತಂ...

ಉಡುಪಿ ಅನಂತಪದ್ಮನಾಭ ದೇವಾಲಯದಲ್ಲಿ ಪತ್ತೆಯಾದ ಶಾಸನೋಕ್ತ ಕಲಾತ್ಮಕ ದೀಪ

ಇಮೇಜ್
ಉಡುಪಿ ಜಿಲ್ಲೆ ಉಡುಪಿ ತಾಲೂಕಿನಲ್ಲಿರುವ ಪೆರ್ಡೂರಿನ  ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ. ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಮತ್ತು ಆದಿಮ ಕಲಾ ಟ್ರಸ್ಟ್ (ರಿ,), ಉಡುಪಿ ಇದರ ಸ್ಥಾಪಕ ಸದಸ್ಯ ಪ್ರೊ. ಮುರುಗೇಶಿ ಟಿ ಅವರು ಈ  ಶಾಸನೋಕ್ತ ಕಲಾತ್ಮಕ ದೀಪದ ಬಗ್ಗೆ ಅಧ್ಯಾಯನ ಮಾಡಿದ್ದು ಇದರ ಮಾಹಿತಿ ಪ್ರಕಟಿಸಿದ್ದಾರೆ. ದುಂಡನೆಯ ತಳವನ್ನು ಹೊಂದಿರುವ ದೀಪದ ಮೇಲ್ಭಾಗದಲ್ಲಿ ಕಮಾನಿನ ಆಕಾರದ ಅತ್ಯಂತ ಕಲಾತ್ಮಕವಾದ ಫಲಕವಿದೆ. ಈ ಫಲಕದ ಎರಡೂ ಬದಿಗಳಲ್ಲಿ ಶೈವ ಮತ್ತು ವೈಷ್ಣವ ಪಂಥದ ಶಿಲ್ಪಗಳಿದ್ದು, ದೇವಾಲಯದ ಶೈವ ಮತ್ತು ವೈಷ್ಣವ ಪರಂಪರೆಯ ಅಪರೂಪದ ಪ್ರತೀಕವಾಗಿದೆ. ದೀಪದ ಮೊದಲ ಮುಖದ ಮಧ್ಯದಲ್ಲಿ ಕಾಲಪುರುಷನ ಮೇಲೆ ನಿಂತಿರುವ ನಟರಾಜನ ಶಿಲ್ಪವಿದೆ. ಎಡ-ಬಲದಲ್ಲಿ ನಗಾರಿಯನ್ನು ಬಾರಿಸುವ ಗಣಧಾರಿ ಹಾಗೂ ತಾಳವನ್ನು ನುಡಿಸುತ್ತಿರುವ  ಭಂಗಿಯ ಶಿಲ್ಪಗಳಿವೆ.ಭಂಗಿಯ ಬಲಭಾಗದಲ್ಲಿ ಖಡ್ಗರಾವಣ ಮತ್ತು ಕುಮಾರ ಶಿಲ್ಪಗಳಿವೆ. ಖಡ್ಗ ರಾವಣ ಅರೆ ಬೆತ್ತಲೆಯಾಗಿ ವಿಸ್ಮಯಮುದ್ರೆಯಲ್ಲಿ ನಿಂತಿರುವ ಮಾರಿಯ ಭುಜದ ಮೇಲೆ ಆಸೀನನಾಗಿದ್ದಾನೆ. ಕುಮಾರ ಮಯೂರವಾಹನನಾಗಿದ್ದಾನೆ. ನಗಾರಿ ಬಾರಿಸುವ ಗಣಧಾರಿಯ ಎಡಕ್ಕೆ ನಂದಿವಾಹನೆ ಪಾರ್ವತಿ ಮತ್ತು ಮೂಷಕ ವಾಹನ ಗಣಪತಿಯ ಶಿಲ್ಪಗಳಿವೆ. ಈ ಶಿಲ್ಪಗಳು ಅತ್ಯಂತ ಸ್ಪಷ್ಟವಾಗಿ ಶಿವನ ಪ್ರಳಯ ತಾಂ...

First man who landed in Mangalore Airport

ಇಮೇಜ್
First man who landed in Mangalore Airport. War hero Vonthibettu Prabhakar Hegde made the first-ever landing in Mangalore, 59 years ago. His passenger: India’s first prime minister Jawaharlal Nehru . He tells Rajul Hegde the airport is tricky but not unsafe. War hero and pioneering aviator Vonthibettu Prabhakar Hegde won’t forget December 25, 1951, for as long as he lives.On that day the retired wing commander, now a spry 84, then an air force flight lieutenant, flew India first prime minister Jawaharlal Nehru on the first-ever flight to Mangalore airport (then called Bajpe Aerodrome) on a DC-3 (Dakota).Talking about the maiden flight from his home in Bangalore, Wing Commander Hegde told us, “When I landed for the first time at Bajpe, they were just digging and levelling the hill to build the runway. So it was just a non-tarmac, level ground, there was no airport as such. But the DC-3 is a small aircraft and it was easy for me to land it.”On being asked Nehru’s observation or if he c...

ಜೈನಕಾಶಿ ಮೂಡಬಿದ್ರೆ

ಇಮೇಜ್
ಮಂಗಳೂರು-ಕಾರ್ಕಳ ರಸ್ತೆಯಲ್ಲಿ ಮಂಗಳೂರಿನಿಂದ 35 ಕಿಮೀ ದೂರದಲ್ಲಿರುವ ಚಿಕ್ಕ ಪಟ್ಟಣ ಮೂಡಬಿದರೆ ಜೈನಕಾಶಿ ಎಂದೇ ಖ್ಯಾತವಾಗಿದೆ. 1 7ನೆಯ ಶತಮಾನದಲ್ಲಿ ಮೂಡಬಿದರೆ  ಪುತ್ತಿಗೆಯ ಚೌಟರಸರ ರಾಜಧಾನಿಯಾಗಿ ಮೆರೆದಿತ್ತು, ಪೋರ್ಚುಗೀಸರ ವಿರುದ್ದ ಹೋರಾಡಿದ ವೀರ ಮಹಿಳೆ  ಉಳ್ಳಾಲದ ರಾಣಿ ಅಬ್ಬಕ್ಕ ಕೂಡ ಇದೇ ಊರಿನಲ್ಲಿ ಹುಟ್ಟಿದ್ದಳು. ೧೯೯೭ರಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ವಿಭಾಗಿಸುವ ಮುನ್ನ ಕಾರ್ಕಳ ತಾಲೂಕಿಗೆ ಸೇರಿದ್ದ ಮೂಡುಬಿದಿರೆಯು ಈಗ ಮಂಗಳೂರಿನ ಭಾಗವಾಗಿದೆ. ಮೂಡುಬಿದಿರೆಯು ಬಹಳ ಹಿಂದಿನಿಂದಲೂ ವ್ಯಾಪಾರ ವಾಣಿಜ್ಯದಲ್ಲಿ ಹೆಸರುವಾಸಿಯಾಗಿದ್ದ ಪಟ್ಟಣ. ಇಲ್ಲಿನ ವ್ಯಾಪಾರಿಗಳು ದೇಶ-ವಿದೇಶಗಳ ವಿವಿಧ ಸ್ಥಳಗಳ ವ್ಯಾಪಾರಿಗಳೊಂದಿಗೆ ವ್ಯವಹಾರ ಸಂಬಂಧ ಇಟ್ಟುಕೊಂಡಿದ್ದರೆಂದು ತಿಳಿದಿದೆ. ಇದಕ್ಕೆ ಸಣ್ಣ ಉದಾಹರಣೆಯಾಗಿ ಸಾವಿರ ಕಂಭದ ಬಸದಿಯ ಗೋಡೆಯ ಮೇಲೆ ಕೆತ್ತಲಾದ ಡ್ರಾಗನ್ ಪ್ರಾಣಿಯ ಉಬ್ಬು ಚಿತ್ರವನ್ನು ಗಮನಿಸಬಹುದು. ಆ ಕಾಲದಲ್ಲೇ ವ್ಯಾಪಾರಿಗಳು ಚೀನಾದೊಂದಿಗೆ ವ್ಯಾಪಾರ ಸಂಬಂಧವಿಟ್ಟುಕೊಂಡಿದ್ದರೆಂದು ಇದರಿಂದ ತಿಳಿಯುತ್ತದೆ. ಸಾವಿರ ಕಂಬದ ಬಸದಿ ಫಲ್ಗುಣಿ ನದಿಯ ದಂಡೆಯ ಮೇಲಿರುವ ಮೂಡಬಿದರೆಯಲ್ಲಿ 18 ಬಸದಿಗಳು ಹಲವಾರು ದೇವಾಲಯಗಳಿವೆ. ಈ ಪೈಕಿ ಸಾವಿರ ಕಂಬಗಳ ಬಸದಿ ಎಂದು ಖ್ಯಾತವಾಗಿರುವ ತ್ರಿಭುವನತಿಲಕ ಚೂಡಾಮಣಿ ಚಂದ್ರಪ್ರಭಾಸ್ವಾಮಿಯ ಮಹಾಚೈತ್ಯಾಲಯ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವ...

ಗಡಾಯಿ ಕಲ್ಲು(ಜಮಲಾಬಾದ್ ಕೋಟೆ)

ಇಮೇಜ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೆಂದರೆ ಎಲ್ಲರ ಮುಂದೆ ಮೂಡುವ ದೃಶ್ಯ `ಗಡಾಯಿ ಕಲ್ಲು'. ಬೆಳ್ತಂಗಡಿ ತಾಲೂಕಿನಲ್ಲೇ ಅತ್ಯಂತ ಆಕರ್ಷಣೆಯ, ಚಾರಣಿಗರಿಗೆ, ಪ್ರವಾಸಿಗರಿಗೆ ಪ್ರಿಯ ತಾಣವಾಗಿ ಈ ಕಲ್ಲು ವಿರಾಜಿಸುತ್ತಿದೆ.  ಕು ದುರೆ ಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ  `ನಡ' ಗ್ರಾಮಕ್ಕೆ ಸೇರಿರುವ  ಮತ್ತು ರಾಜ್ಯ ಹೆದ್ದಾರಿಗೆ ಸನಿಹದಲ್ಲಿರುವ ಈ ಗಡಾಯಿಕಲ್ಲು ಹಲವಾರು ಐತಿಹ್ಯಗಳನ್ನೂ ಚಾರಿತ್ರಿಕ ದಾಖಲೆಗಳನ್ನೂ ಹೊಂದಿದೆ. ಅದಮ್ಯ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಈ ಕಲ್ಲು ಪಶ್ಚಿಮ ಘಟ್ಟದ ಹಿನ್ನಲೆಯೊಂದಿಗೆ ಶೋಭಿಸುತ್ತಾ ಚಾರಣಿಗರನ್ನು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಕೈ ಬೀಸಿ ಕರೆಯುತ್ತಿದೆ.   ಸಮುದ್ರ ಮಟ್ಟದಿಂದ 1788 ಅಡಿ ಎತ್ತರದಲ್ಲಿದೆ ಗಡಾಯಿಕಲ್ಲು. ಇದರ ಮೇಲ್ಭಾಗದಲ್ಲಿ ನರಸಿಂಹಗಡ ಅಥವಾ ಜಮಲಾಗಡ ಎಂಬ ಕೋಟೆ ಕಾಣಬಹುದಾಗಿದೆ. 2,800 ಮೆಟ್ಟಿಲುಗಳನ್ನೇರಿದಾಗ ಜಮಲಾಗಡದ ಮೇಲ್ಭಾಗ ತಲುಪಬಹುದು. ಗಡಾಯಿಕಲ್ಲಿನ ಮೇಲಕ್ಕೇರುತ್ತಾ ಸಾಗಿದಂತೆ ಒಂದು ದ್ವಾರ ಸಿಗುತ್ತದೆ. ಈ ದ್ವಾರದ ನಂತರ ಕಲ್ಲನ್ನೇ ಕಡಿದು ವಿನ್ಯಾಸಗೊಳಿಸಿ ಮೆಟ್ಟಿಲು ರಚಿಸಲ್ಪಟ್ಟಿದೆ. ತುಂಬಾ ಕಡಿದಾದ ಈ ಮೆಟ್ಟಿಲುಗಳ ಮೇಲೆ ಸಾಗುವುದೇ ಒಂದು ಪ್ರಯಾಸ ಮತ್ತು ಸಾಹಸದ ಕಾರ್ಯ. ಇಂಡೋ ಸಾರ್ಸೆನಿಕ್ ಶೈಲಿಯನ್ನು ಹೋಲುವ ಶಿಲ್ಪ ಚಿತ್ರಗಳು ಇಲ್ಲಿನ ಒಂದನೇ ಮಹಾ ದ್ವಾರಗಳಲ್ಲಿ ಕಂಡುಬರುತ್ತವೆ. ಗಡಾಯಿಕಲ್ಲಿನ ಮೇಲ್ಭ...