Posts

Showing posts with the label mangaluru Samachara

'ಮಂಗಳೂರು ಸಮಾಚಾರ " & ಮೊಗ್ಲಿಂಗ್

Image
ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ಮುದ್ರಣ ಕಲೆ ಮಹತ್ತರ ಪಾತ್ರ ವಹಿಸಿದೆ.ಮೊದಲು ಪುಸ್ತಕಗಳು ನಂತರ ನಿಯತಕಾಲಿಕೆಗಳು ಹಾಗೂ ದಿನಪತ್ರಿಕೆಗಳು ಜ್ಞಾನದ ಪ್ರಸರಣ ಆರಂಭಿಸಿದವು.ಪ್ರತಿ ವರ್ಷ ಜುಲೈ 1 ರಂದು ಕರ್ನಾಟಕದಲ್ಲಿ `ಪತ್ರಿಕಾ ದಿನ' ಆಚರಿಸಲಾಗುತ್ತದೆ.ಇವುಗಳ ಮೂಲ ಮಂಗಳೂರು ಎಂದರೆ ಹೆಚ್ಚಿನವರಿಗೆ ಗೊತ್ತಿರಿಕ್ಕಿಲ್ಲ.ರಾಜ್ಯದಲ್ಲೇ ಮೊಟ್ಟಮೊದಲ ಪತ್ರಿಕೆ ಆರಂಭವಾದದ್ದು ಮಂಗಳೂರಿನಲ್ಲಿ.ಪತ್ರಿಕೊದ್ಯಮಾ ಇಂದು ಸಾಕಷ್ಟು ಬೆಳೆದು ನಿಂತಿದೆ.ಇದು ಬೆಳೆದು ಬಂದ ಹಿನ್ನೆಲೆ ನೋಡುವ ಅಗತ್ಯವಿದೆ. ಜರ್ಮನಿಯ ಜೊಹಾನ್ ಗುಟನ್ಬರ್ಗ 1440 ರಲ್ಲಿ ಎರಕಹೊಯ್ದ ಅಚ್ಚು ಮೊಳೆ ತಯಾರಿಸಿ, ಪವಿತ್ರ ಗ್ರಂಥ `ದಿ ಬೈಬಲ್' ಅನ್ನು ದಪ್ಪನೆಯ ಹಾಳೆಯ ಮೇಲೆ ಮುದ್ರಿಸಿದಾಗ, ಅದೊಂದು ಕ್ರಾಂತಿಕಾರಕ ಆವಿಷ್ಕಾರವಾಗಿತ್ತು. ಮುದ್ರಣ ಜ್ಞಾನದ ದಾಹ ತಣಿಸುವ ಪ್ರಮುಖ ಸೆಲೆಯಾಯಿತು. ನಾಗರಿಕತೆಯ ಬೆಳವಣಿಗೆಯಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದ ಹಲವೇ ಸಾಧನೆಗಳಲ್ಲಿ ಮುದ್ರಣ ಯಂತ್ರ ಸಹ ಒಂದು ಎಂಬ ಸತ್ಯವನ್ನು ಆಧುನಿಕ ಇತಿಹಾಸಕಾರರು ಕೂಡ ಒಪ್ಪಿಕೊಂಡಿದ್ದಾರೆ.ಯೇಸುಕ್ರಿಸ್ತನ ಸಂದೇಶಗಳನ್ನು ಜಗತ್ತಿಗೆ ತಿಳಿಸಬೇಕೆಂಬ ಹಂಬಲದಿಂದ ಯುರೋಪಿನಲ್ಲಿ ಹಲವು ಧರ್ಮಪ್ರಸಾರ ಸಂಸ್ಥೆಗಳು ಹುಟ್ಟಿಕೊಂಡವು. ಜರ್ಮನಿ-ಪ್ರಾನ್ಸ್ ದೇಶಗಳ ಗಡಿಗೆ ಹೊಂದಿಕೊಂಡಿರುವ ಪುಟ್ಟ ಪಟ್ಟಣವಾದ ಬಾಸೆಲ್ ನಲ್ಲಿ ಅಂದಿನ ಜನ ಯುರೋಪಿನಲ್ಲಿನ ಯುದ್ಧಗಳಿಂದ ಬೇಸತ್ತಿದ್ದರು. ದೇವರ ಸೇವೆ ಮಾಡಿ...