Posts

ಬ್ಯಾರಿಗಳು

Image
" ಬ್ಯಾರಿ " ಎಂಬ ಪದವು ತುಳುವಿನ ಬ್ಯಾರ ಎಂಬ ಶಬ್ದ ದಿಂದ ಉದ್ಭವಗೊಂಡಿದ್ದು ವ್ಯಾಪಾರ ವಹಿವಾಟು ಎಂದು ಅದರ ಅರ್ಥ. ಪ್ರಾಚೀನ ಕಾಲದಿಂದಲೂ ಈ ಜನಾಗದ ಹೆಚ್ಚಿನ ಜನರು ವ್ಯಾಪಾರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದರು. ಆದ್ದರಿಂದ ಸ್ಥಳೀಯ ತುಳುವರು ಅವರನ್ನು ಬ್ಯಾರಿಗಳೆಂದು ಕರೆಯುತ್ತಿದ್ದರು. ಕ್ರಿ.ಶ.1891ರ ಜನಗಣತಿಯ ಪ್ರಕಾರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ ಕಾಲದಲ್ಲಿ 90,345 ಬ್ಯಾರಿ ವ್ಯಾಪಾರಿಗಳಿದ್ದರು. ಮತ್ತು ಇದು ಒಟ್ಟು ವರ್ತಕರ ಪ್ರಮಾಣಕ್ಕೆ ಹೋಲಿಸಿದರೆ ಸುಮಾರು ಶೇಕಡಾ 92ರಷ್ಟಾಗಿತ್ತು. ಆದ್ದರಿಂದಲೇ ಅವರನ್ನು ಬ್ಯಾರಿಗಳೆಂದು ಕರೆಯಲಾಗುತ್ತಿತ್ತು ಮತ್ತು ಇದು ಅನ್ವರ್ಥಕನಾಮವೂ ಆಗಿತ್ತು. ಬ್ಯಾರಿಗಳು ತುಳುನಾಡು ಎಂದು ಹಿಂದೆ ಕರೆಯಲಾಗುತ್ತಿದ್ದ ಕರ್ನಾಟಕದ ಈಗಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಾಸವಾಗಿರುವ ಒಂದು ಮುಸ್ಲಿಂ ಜನಾಂಗ. ಅವರು ತಮ್ಮದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಒಂದು ಸಾಮಾಜಿಕ ಪಂಗಡ. ಬ್ಯಾರಿಗಳಿಗೆ ಕೊಂಕಣ ತೀರದ ನವಾಯತರು ಮತ್ತು ಮಲಬಾರಿನ ಮಾಪಿಳ್ಳಗಳಿಗೆ ಸಮನಾದ ಒಂದು ಮಹತ್ವದ ಸಾಂಸ್ಕೃತಿಕ ಸಂಪ್ರದಾಯವಿದೆ. 1891ರ ಕೂಚ್ ಮನ್ ಸಮೀಕ್ಷಾ ವರದಿಯಲ್ಲಿ ನಮೂದಾಗಿರುವಂತೆ ಈ ಜನಾಂಗದ ಪ್ರಮುಖ ಗುರುತು ಎಂದರೆ ಪುರುಷರಿಗೆ ಬ್ಯಾರಿ ಮತ್ತು ಮಹಿಳೆಯರಿಗೆ ಬ್ಯಾರ್ದಿ ಎಂಬ ಒಕ್ಕಣೆಯಿರುವುದು. ಅಲ್ಲದೆ ಈ ಜನಾಗಕ್ಕೂ...

ಭಗವಾನ್ ಬಾಹುಬಲಿ ವೇಣೂರು.

Image
ಕರಾವಳಿ ನಾಡು ದಕ್ಷಿಣ ಕನ್ನಡ ಜಿಲ್ಲೆ ಅನೇಕ ಪುಣ್ಯ ನೆಲೆಗಳ ಬೀಡು.ವಿವಧ ಜಾತಿ- ಧರ್ಮ, ಸಂಸ್ಕೃತಿಗಳ ಜನರು ಇಲ್ಲಿದ್ದರೂ ಎಲ್ಲಾ ಧರ್ಮಿಯರು ಇಲ್ಲಿ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ.ಇವರಲ್ಲಿ ಅತ್ಯಂತ ಪುರಾತನವಾದ ಜೈನ ಧರ್ಮವು ಒಂದು.ಜೈನ ಧರ್ಮದ ಻ನೇಕ ಪುಣ್ಯ ಕ್ಷೇತ್ರಗಳು ಈ ಕರಾವಳಿ ಭಾಗದಲ್ಲಿವೆ ಇವುಗಳಲ್ಲಿ ಈ ವೇಣೂರು ಕೂಡ ಒಂದು. ವಿರಾಟ್ ವಿರಾಗಿ ವೇಣೂರ ಗೊಮ್ಮ ಟೇಶ್ವರ ನಿಗೆ ಇದೀಗ ಮಹಾ ಮಜ್ಜ ನಕ್ಕೆ ಭರದ ಸಿದ್ಧತೆ. 20 12 ಜನವರಿ 29 ರಂದು ಮಹಾ ಮಜ್ಜ ನಕ್ಕೆ ಈಗಾ ಗಲೇ ದಿನ ನಿಗಧಿ ಯಾಗಿದ್ದು,ಪೂರ್ವ ಭಾವೀ ಸಿದ್ದತೆ ಗಳು ಭರ ದಿಂದ ಸಾಗಿವೆ.ಜಗ ತ್ತಿಗೆ ಶಾಂತಿ,ತ್ಯಾಗ ಮತ್ತು ಅಹಿಂ ಸೆಯ ಸಂದೇ ಶವನ್ನು ಸಾರಿದ ಭಗ ವಾನ್ ಬಾಹು ಬಲಿಯ ಪುಣ್ಯ ಕ್ಷೇತ್ರ ಗಳಲ್ಲಿ ಒಂ ದಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂ ಗಡಿ ತಾಲೂ ಕಿನ ವೇಣೂರು ರಾಜ್ಯದ ಪ್ರಸಿದ್ದ ಜೈನ ತೀರ್ಥ ಕ್ಷೇತ್ರ ಗಳಲ್ಲಿ ಒಂದು. ಕ್ರಿ.ಶ. 1604 ರಲ್ಲಿ ಈ ಪ್ರದೇಶ ದಲ್ಲಿ ಆಳ್ವಿಕೆ ನಡೆಸು ತ್ತಿದ್ದ 4ನೇ ಅಜಿಲರ ಅರಸ ರಾದ ತಿಮ್ಮಣ್ಣಾಜಿಲ ಅರಸರಿಂದ ಪ್ರತಿ ಷ್ಠಾಪಿತವಾದ 35 ಅಡಿ ಎತ್ತರದ ಏಕ ಶಿಲಾ ಗೋಮ ಟೇಶ್ವರ ಮಹಾಮೂರ್ತಿ ಅತೀ ವಿರಳವಾಗಿರುವ ಮಂದಸ್ಮಿತ ಮುಖಮುದ್ರೆಯನ್ನು ಹೊಂದಿದ್ದು, ಜಾತಿ-ಭೇಧವಿಲ್ಲದೆ ಎಲ್ಲಾ ಧರ್ಮಿಯರನ್ನೂ ತನ್ನೆಡೆ ಕೈ ಬೀಸಿ ಕರೆಯುತ್ತಿದೆ.ಎಲ್ಲ ಬಾಹುಬಲಿ ವಿಗ್ರಹಗಳೂ ಗುಡ್ಡ- ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದರೆ, ವೇಣೂರಿನ ಈ ಬಾಹುಬಲಿ ಮೂರ್ತಿ ಮಾ...

ಬಿ.ಎಂ. ಇದಿನಬ್ಬ: ಒಂದು ನೆನಪು

Image
ಗಾಂಧಿ ಟೋಪಿ,ಶುಭ್ರ ಖಾದಿ ಬಟ್ಟೆ,ಬಿಳಿ ಗಡ್ಡ, ಕನ್ನಡಕ, ಕಂಚಿನ ಕಂಠ. ಅದರಲ್ಲಿ ಹೊರಹೊಮ್ಮಿದ ಕಯ್ಯರ ಕಿಂಞಣ್ಣ ರೈ ಅವರ ‘‘ಐಕ್ಯವೊಂದೇ ಮಂತ್ರ...’’ ಹಾಡು. ಇಷ್ಟು ವಿವರಿಸಿದರೆ ಸಾಕು, ಅವಿಭಾಜಿತ ದಕ್ಷಿಣ ಕನ್ನಡ ಕರಾವಳಿಯಲ್ಲಿ ಯಾರನ್ನೂ ಕೇಳಿದರು ಹೇಳುತ್ತಾರೆ ‘‘ಅವರು ಇದಿನಬ್ಬ’’. ಬಿ. ಎಂ.ಇದಿನಬ್ಬ ಕನ್ನಡ ನಾಡನ್ನು ಅಗಲಿ ವರ್ಷಗಳೇ ಸಂದಿವೆ. ಅವರ ಕಂಚಿನ ಕಂಠದ ಗಮಕ ಹಾಡುಗಳಿಲ್ಲದೆ ಕರಾವಳಿಯ ವೇದಿಕೆಗಳು ಬಣಗುಟ್ಟುತ್ತಿವೆ. ಇದಿನಬ್ಬರ ಹೆಸರೇ ಸದಾ ಕೋಮು ದಳ್ಳುರಿಯಲ್ಲಿ ಬೆಂದ ಕರಾವಳಿಯ ಕೋಮುಸೌಹಾರ್ದಕ್ಕೆ ಪರ್ಯಾಯ ಪದ. ಬಹುಷ ಸೌಹಾರ್ದದ ಕುರಿತಂತೆ ಮಾತನಾಡಿದ್ದು ಬಹಳಷ್ಟು ಕಡಿಮೆ.ಬದಲಿಗೆ ಅದನ್ನು ಬದುಕಿನಲ್ಲಿ ತೋರಿಸಿಕೊಟ್ಟವರು. ಒಬ್ಬ ಮುಸ್ಲಿಮನಾಗಿದ್ದರೂ ಇದಿನಬ್ಬ ಎಂದಿಗೂ ಕೇವಲ ಮುಸ್ಲಿಮರ ನಾಯಕರಾಗಿರಲಿಲ್ಲ.ಅವರು ಎಂದೆಂದಿಗೂ ಕನ್ನಡದ ಕಟ್ಟಾಳು. ಕನ್ನಡತನ, ಸೌಹಾರ್ದ, ಸಹಕಾರ, ಸರಳತೆ, ನೇರನುಡಿ, ಪ್ರಾಮಾಣಿಕ ಬದುಕು...ಇವು ಇದಿನಬ್ಬ ನಮ್ಮ ನಡುವೆ ಊರಿ ಹೋದ ಹೆಜ್ಜೆಗಳು....ಆ ಹೆಜ್ಜೆಗಳ ಹಿಂದೆ ಹೆಜ್ಜೆಗಳನ್ನಿಟ್ಟು ಸಾಗಿದರೂ ಸಾಕು...ಕರಾವಳಿ ಮಾತ್ರವಲ್ಲ, ಇಡೀ ಕರ್ನಾಟಕವೇ ಸೌಹಾರ್ದದ ಬೀಡಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದಿನಬ್ಬರವರ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಿದರೆ, ಇದಿನಬ್ಬರ ತಂದೆ ತೀರಿದಾಗ ಅವರು ಹತ್ತು ವರ್ಷದ ಕೂಸು. ತಾಯಿ ಗರ್ಭವತಿ. ಇದ್ದುದರಲ್ಲಿ ಇದಿನಬ್ಬರೇ ದೊಡ್ಡ ಮಗ.ತಂದೆ ನಿಧನರಾಗುವ ಮೊದಲು ತನ್ನ...

ಮಂಗಳೂರು ಟೈಲ್ಸ್..

Image
ಒಂದು ಕಾಲಕ್ಕೆ ಮಂಗಳೂರು ಹೆಂಚು ಇಲ್ಲಿನ ಜನರ ಜೀವನಾಡಿಯಾಗಿತ್ತು. ಬಡವರು ಮನೆ ಕಟ್ಟಲು ಮುಳಿಹುಲ್ಲನ್ನು ಆಶ್ರಯಿಸುತ್ತಿ ದ್ದರೆ, ಶ್ರೀಮಂತರು ಹೆಂಚನ್ನು ಬಳಸುತ್ತಿದ್ದರು.ಸ್ವಾತಂತ್ರಪೂರ್ವದಲ್ಲೇ ಅವಿಭಜಿತ ದಕ್ಷಿಣ ಕನ್ನಡ ಹೆಂಚು ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಇಲ್ಲಿನ ಹೆಂಚು ಗಳು ‘ಮಂಗಳೂರು ಹೆಂಚು’ ಎಂದೇ ಪ್ರಸಿದ್ಧಿ ಪಡೆದಿತ್ತು. ಬ್ರಿಟಿಷರು ಕೂಡ ಇಲ್ಲಿನ ಹೆಂಚಿಗೆ ತಲೆ ತೂಗಿದ್ದರು. ಯುರೋಪ್, ಆಫ್ರಿಕಾ ಖಂಡ ಗಳಿಗೆ ಹಾಗೂ ದೇಶಾ ದ್ಯಂತ ಇಲ್ಲಿಂದಲೇ ಹೆಂಚುಗಳು ರಫ್ತಾಗುತ್ತಿದ್ದವು. ನೂರಾರು ಕುಟುಂಬಗಳು ಈ ಉದ್ಯಮವನ್ನು ಆಶ್ರ ಯಿಸಿದ್ದವು. ಸಾವಿರಾರು ಕಾರ್ಮಿಕರ ಬದುಕನ್ನು ಇದು ಹಸನುಗೊಳಿಸಿತ್ತು.ಆದರೆ, ಬರಬರುತ್ತಾ ಹೆಂಚಿನ ಮನೆ, ಅಂಗಡಿಗಳು ಕಾಂಕ್ರಿಟ್ ಮಯವಾಗ ತೊಡಗಿತು. ಶ್ರೀಮಂತರು ಮಾತ್ರವಲ್ಲ ಮಧ್ಯಮ ವರ್ಗದ ಜನರೂ ಆರ್‌ಸಿಸಿ ಕಟ್ಟಡ ನಿರ್ಮಾಣ ಶುರುವಿಟ್ಟರು. ಹಾಗಾಗಿ ಇದೀಗ ನಗರ ಮಾತ್ರವಲ್ಲ ಗ್ರಾಮಾಂತರ ಪ್ರದೇಶಗಳಲ್ಲೂ ಆರ್‌ಸಿಸಿ ಮನೆಗಳನ್ನು ಕಾಣಬಹುದು. ಹೆಂಚಿನ ಮನೆ ನಿರ್ಮಾಣಕ್ಕೆ ಮುಂದಾ ದರೆ ಅಂತಹವರನ್ನು ತಾತ್ಸಾರದ ಭಾವನೆ ಯಿಂದ ನೋಡುವವರಿಗೂ ಇಂದಿನ ಕಾಲದಲ್ಲಿ ಕೊರತೆ ಇಲ್ಲ. ಹಾಗಾಗಿ ಈಗ ಎಲ್ಲೆಡೆ ಕಾಂಕ್ರಿಟ್ ಕಟ್ಟಡ ಗಳೇ ನಿರ್ಮಾಣ ವಾಗುತ್ತಿದೆ. ಇದರ ನೇರ ಪರಿಣಾಮ ಹೆಂಚು ಉದ್ಯಮದ ಮೇಲಾಗಿದೆ.ಸ್ವರ್ಣ ಯುಗ ದಲ್ಲಿದ್ದ ಮಂಗ ಳೂರು ಹೆಂಚಿನ ಸ್ಥಿತಿ ಇದೀಗ ಆದೋ ಗತಿಗೆ ಇಳಿಸಿದ್ದು, ಯಾರೂ ಕೇಳುವವರಿಲ್ಲದ ಸ್ಥಿತಿ ನಿರ್ಮ...

'ಮಂಗಳೂರು ಸಮಾಚಾರ " & ಮೊಗ್ಲಿಂಗ್

Image
ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ಮುದ್ರಣ ಕಲೆ ಮಹತ್ತರ ಪಾತ್ರ ವಹಿಸಿದೆ.ಮೊದಲು ಪುಸ್ತಕಗಳು ನಂತರ ನಿಯತಕಾಲಿಕೆಗಳು ಹಾಗೂ ದಿನಪತ್ರಿಕೆಗಳು ಜ್ಞಾನದ ಪ್ರಸರಣ ಆರಂಭಿಸಿದವು.ಪ್ರತಿ ವರ್ಷ ಜುಲೈ 1 ರಂದು ಕರ್ನಾಟಕದಲ್ಲಿ `ಪತ್ರಿಕಾ ದಿನ' ಆಚರಿಸಲಾಗುತ್ತದೆ.ಇವುಗಳ ಮೂಲ ಮಂಗಳೂರು ಎಂದರೆ ಹೆಚ್ಚಿನವರಿಗೆ ಗೊತ್ತಿರಿಕ್ಕಿಲ್ಲ.ರಾಜ್ಯದಲ್ಲೇ ಮೊಟ್ಟಮೊದಲ ಪತ್ರಿಕೆ ಆರಂಭವಾದದ್ದು ಮಂಗಳೂರಿನಲ್ಲಿ.ಪತ್ರಿಕೊದ್ಯಮಾ ಇಂದು ಸಾಕಷ್ಟು ಬೆಳೆದು ನಿಂತಿದೆ.ಇದು ಬೆಳೆದು ಬಂದ ಹಿನ್ನೆಲೆ ನೋಡುವ ಅಗತ್ಯವಿದೆ. ಜರ್ಮನಿಯ ಜೊಹಾನ್ ಗುಟನ್ಬರ್ಗ 1440 ರಲ್ಲಿ ಎರಕಹೊಯ್ದ ಅಚ್ಚು ಮೊಳೆ ತಯಾರಿಸಿ, ಪವಿತ್ರ ಗ್ರಂಥ `ದಿ ಬೈಬಲ್' ಅನ್ನು ದಪ್ಪನೆಯ ಹಾಳೆಯ ಮೇಲೆ ಮುದ್ರಿಸಿದಾಗ, ಅದೊಂದು ಕ್ರಾಂತಿಕಾರಕ ಆವಿಷ್ಕಾರವಾಗಿತ್ತು. ಮುದ್ರಣ ಜ್ಞಾನದ ದಾಹ ತಣಿಸುವ ಪ್ರಮುಖ ಸೆಲೆಯಾಯಿತು. ನಾಗರಿಕತೆಯ ಬೆಳವಣಿಗೆಯಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದ ಹಲವೇ ಸಾಧನೆಗಳಲ್ಲಿ ಮುದ್ರಣ ಯಂತ್ರ ಸಹ ಒಂದು ಎಂಬ ಸತ್ಯವನ್ನು ಆಧುನಿಕ ಇತಿಹಾಸಕಾರರು ಕೂಡ ಒಪ್ಪಿಕೊಂಡಿದ್ದಾರೆ.ಯೇಸುಕ್ರಿಸ್ತನ ಸಂದೇಶಗಳನ್ನು ಜಗತ್ತಿಗೆ ತಿಳಿಸಬೇಕೆಂಬ ಹಂಬಲದಿಂದ ಯುರೋಪಿನಲ್ಲಿ ಹಲವು ಧರ್ಮಪ್ರಸಾರ ಸಂಸ್ಥೆಗಳು ಹುಟ್ಟಿಕೊಂಡವು. ಜರ್ಮನಿ-ಪ್ರಾನ್ಸ್ ದೇಶಗಳ ಗಡಿಗೆ ಹೊಂದಿಕೊಂಡಿರುವ ಪುಟ್ಟ ಪಟ್ಟಣವಾದ ಬಾಸೆಲ್ ನಲ್ಲಿ ಅಂದಿನ ಜನ ಯುರೋಪಿನಲ್ಲಿನ ಯುದ್ಧಗಳಿಂದ ಬೇಸತ್ತಿದ್ದರು. ದೇವರ ಸೇವೆ ಮಾಡಿ...

ಈ ಜಮೇದಾರ ಬ್ಯಾಜ್ ಗೆ 2 ಶತಮಾನಗಳ ಇತಿಹಾಸ..!!

Image
ದಕ್ಷಿಣ ಕನ್ನಡ ಸೇರಿದಂತೆ ಭಾರತದಲ್ಲಿ ಬ್ರಿಟೀಷರು ಆಳ್ವಿಕೆ ನಡೆಸಿದ್ದು ಇದೀಗ ಇತಿಹಾಸ. ಈಗ ಕಾಣುವುದು ಅವರು ಬಿಟ್ಟು ಹೋದ ಪಳೆಯುಳಿಕೆ ಮಾತ್ರ.ನಮ್ಮ ಸಂವಿಧಾನವು ನಮ್ಮದೇ ಆದ ರೂಪು ರೇಷೆಗಳನ್ನು ಹಾಕಿಕೊಂಡು ಆಡಳಿತ ನಡೆಸುತ್ತಿದೆ.ಆದರೆ ಕೆಲವೊಂದು ಪದ್ದತಿಗಳು, ನಿಯಮಗಳು ಮಾತ್ರ ಆ ಕಾಲದಿಂದ ಇಂದಿಗೂ ಕ್ರಮಬದ್ದವಾಗಿ ನಡೆಯುತ್ತ ಬಂದಿವೆ.ಇದಕ್ಕೆ ಸಾಕ್ಷಿ ಕಳೆದ 200 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿಚಲಾವಣೆಯಲ್ಲಿರುವ 'ಜಮೇದಾರ ಬ್ಯಾಜ್'.1799 ರ ಜುಲೈ 8 ರಂದು ಮೇಜರ್ ಮುನ್ರೋ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಜಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2010 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಜಿಲ್ಲಾಧಿಕಾರಿಗಳು ಸೇವೆ ಸಲ್ಲಿಸಿದ್ದಾರೆ.1816 ರಲ್ಲಿ ಬ್ರಟೀಷ್ ಅಧಿಕಾರಿ ತೋಮಸ್ ಹ್ಯಾರಿಸ್ ಅವರು 5 ನೇ ಜಿಲ್ಲಾ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಅವರಿಗೆ ಈ ಬ್ಯಾಜ್ ನ ಐಡಿಯ ಬಂದು 1822 ರಲ್ಲಿ ಆತ ಜಾರಿಗೆ ತಂದೇ ಬಿಟ್ಟ.ಅಂದಿನಿಂದ ಕಲೆಕ್ಟರರ ಜವಾನರಾಗಿ ಕೆಲಸ ನಿರ್ವಹಿಸುವವರು ಖಡ್ಡಾಯವಾಗಿ ಈ ಬ್ಯಾಜ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದು ಇಂದಿಗೂ ಚಾಲ್ತಿಯಲ್ಲಿದೆ. ಅಮದು ಜಿಲ್ಲಾಧಿಕಾರಿ ಕರ್ತವ್ಯ ನಿಮಿತ್ತ ಏಲ್ಲೇ ಹೋದರೂ ಈತ ಆತನನ್ನು ಹಿಂಬಾಲಿಸಬೇಕಿತ್ತು. ಇದೀಗ ಕಾಲ ಬದಲಾಗಿದೆ,ಆಡಳಿತ ಶೈಲಿಯೂ ಬದಲಾಗಿದೆ. ಈ ಕರ್ತವ್ಯ ನಿರ್ವಹಿಸುವ ಜಮೇದಾರ ಜಿಲ...

ಪರಶುರಾಮ ಸೃಷ್ಟಿ ಮಂಗಳೂರು...

Image
'ಮಂಗಳೂರು' ಹೆಸರೇ ಸೂಚಿಸುವಂತೆ ಮಂಗಳಾ ದೇವಿಯಿಂದ ತನ್ನ ಹೆಸರನ್ನು ಪಡೆದುಕೊಂಡಿದೆ.ನೆರೆಯ ಕೇರಳಿಗರಿಗೆ ಇಂದಿಗೂ ಇದು ಮಂಗಳಾಪುರ.ಇದರ ಹಿನ್ನೆಲೆ ಗಮನಿಸಿದರೆ ಇದು ಹೌದು ಕೂಡ.ಸ್ಥಳೀಯ ದೇವತೆಯಾದ ಮಂಗಳಾ ದೇವಿಯಿಂದ ಮಂಗಳೂರು ತನ್ನ ಹೆಸರನ್ನು ಪಡೆದುಕೊಂಡಿದೆ.ಮತ್ಸ್ಯೇಂದ್ರ ನಾಥನೆಂಬ ನಾಥ್ ಪಂಥದ ಸಂತ, ಪೆರುಮಳಾದೇವಿ ಎಂಬ ಕೇರಳದ ರಾಜಕುಮಾರಿಯ ಜೊತೆ ಇಲ್ಲಿಗೆ ಬಂದಿದ್ದ. ಅವನು ರಾಜಕುಮಾರಿಯನ್ನು ತನ್ನ ಪಂಥಕ್ಕೆ ಪರಿವರ್ತಿಸಿಕೊಂಡು "ಮಂಗಳಾದೇವಿ" ಎಂದು ಮರುನಾಮಕರಣ ಮಾಡಿದನು. ಸ್ವಲ್ಪ ಸಮಯದ ಅನಾರೋಗ್ಯದಿಂದ ಮಂಗಳಾದೇವಿಯು ನಿಧನ ಹೊಂದಿದ್ದರಿಂದ ಅವರು ತಮ್ಮ ಪ್ರಯಾಣವನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಅವಳ ಹೆಸರಿನಲ್ಲಿ ಬೋಳಾರದಲ್ಲಿ ಒಂದು ದೇವಸ್ಥಾನವನ್ನು ನಿರ್ಮಿಸಲಾಯಿತು.ಇದುವೇ ಇತಿಹಾಸ ಪ್ರಸಿದ್ದ ಮಂಗಳಾ ದೇವಿ ದೇವಸ್ಥಾನ. ಅದು ನಂತರ ಕ್ರಿ.ಶ.968 ರಲ್ಲಿ ಅಲೂಪ ದೊರೆ ಕುಂದ ವರ್ಮನಿಂದ ಜೀರ್ಣೋ ದ್ಧಾರಕ್ಕೆ ಒಳಪಟ್ಟಿತು.ಈ ನಗರದ ಹಲವು ಪುರಾತನ ಉಲ್ಲೇಖಗಳಲ್ಲಿ ಒಂದನ್ನು ಪಾಂಡ್ಯ ರಾಜ ಚೆಟ್ಟಿಯನ್ ನೀಡಿದ್ದಾನೆ. ಅವನು ಕ್ರಿ.ಶ.719 ರಲ್ಲಿ ಇದನ್ನು ಮಂಗಲಾಪುರಂ ಎಂದು ಕರೆದಿದ್ದ. 11 ನೇ ಶತಮಾನದ ಅರಬ್ಬಿ ಪ್ರಯಾಣಿಕ ಇಬ್ನ ಬತೂತ ಮಂಗಳೂರನ್ನು ಮಂಜರೂರ್ ಎಂದು ಉಲ್ಲೇಖಿಸಿದ್ದಾನೆ.ಅತೀ ಸಂಪತ್ಭರಿತ ಪ್ರದೇಶವಾದ ಇದು ಕದಂಬರು, ಆಳುಪರು,ವಿಜಯನಗರದ ಅರಸರು,ಹೈದರಾಲಿ-ಟಿಪ್ಪು ಸುಲ್ತಾನರು ಆಳ್ವಿಕೆಯಲ್ಲಿತ್ತು....