Posts

ಅಪ್ರತಿಮ ದೇಶ ಭಕ್ತ ' ಜಾರ್ಜ್ ಫರ್ನಾಂಡೀಸ್ '

Image
ಜಾರ್ಜ್  ಫರ್ನಾಂಡೀಸ್  ನಂತಹ ಮನವತಾವಾದಿ, ಅಪ್ರತಿಮ ದೇಶ ಭಕ್ತ , ಛಲಗಾರ ಮತ್ತು ಸಾಮಾಜಿಕ ಹಾಗೂ ಧೀಮಂತ ರಾಜಕರಣಿ ಯನ್ನು ನಾವು ಕಾಣಲು ಸಾಧ್ಯವೇ ಇಲ್ಲ. ಇಂತಹ ಮಹಾನ್ಮಾ ನಾಯಕ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್  ಅಲ್ಜೈಮರ್ ಕಾಯಿಲೆಯಿಂದ ಬಳಲುತ್ತಿದ್ದು   ಇದ್ದೂ ಇಲ್ಲಂದಂಥ ಸ್ಥಿತಿಯಲ್ಲಿದ್ದಾರೆ. ಹೋರಾಟಗಾರ, ಕಾರ್ಮಿಕ ಮುಖಂಡ, ಪ್ರಖರ ಸಮಾಜವಾದಿ, ಅತ್ಯುತ್ತಮ ವಾಗ್ಮಿ ಹೀಗೆ ಏನೆಲ್ಲ ವಿಶೇಷಣಗಳನ್ನು ನೀಡಿದರೂ ಜಾರ್ಜ್‌ಗೆ ಅನ್ವರ್ಥಕವಾಗುತ್ತವೆ. ಎಲ್ಲದಕ್ಕೂ ಹೆಚ್ಚಾಗಿ ತಾವು ನಂಬಿದ ಸಿದ್ಧಾಂತವನ್ನು ತ್ಯಜಿಸದೇ ಅವರು ರಾಜಕೀಯ ಜೀವನದಲ್ಲಿ ಏರಬೇಕಾದ ಎಲ್ಲ ಮಜಲುಗಳನ್ನು ಏರಿದರು. ಹಾಗಂತ, ಸುಮ್ಮನೆ ಸಿಕ್ಕ ಅಥವಾ ಪಡೆದ ಅಧಿಕಾರದಲ್ಲಿ ವಿಜೃಂಭಿಸಿ ಇಳಿಯಲಿಲ್ಲ. ತಾವು ಏರಿದ ಪ್ರತಿ ಹುದ್ದೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದು ಅವರ ಹೆಗ್ಗಳಿಕೆ.ಹೀಗೆ ಜಾರ್ಜ್ ಫರ್ನಾಂಡೀಸ್ ಫುಟ್ ಪಾತಿನಿಂದ ಹಲವಾರು ಮಂತ್ರಿಸ್ಥಾನದ ವರೆಗೆ ಮೇಲೇರಿದರೂ ಸರ್ವೇ ಸಾಧಾರಣನಂತೆ ಬದುಕಿ, ಅಸಾಧಾರಣ ಧೈರ್ಯಶಾಲಿಯಾಗಿ ಸಾಹಸಮಯ ಬದುಕನ್ನು ನಡೆಸಿದವರು.                ಪ್ರಸಿದ್ಧ ಕಾರ್ಮಿಕ ಹೋರಾಟಗಾರ, ಮಾನವ ಹಕ್ಕುಗಳ ಹೋರಾಟಗಾರ, ಪತ್ರಕರ್ತ, ಸಮಾಜವಾದಿ, ರಾಜಕಾರಣಿ, ಕ್ರಿಯಾಶೀಲ ವ್ಯಕ್ತಿ ಜಾರ್ಜ್ ಫರ್ನಾಂಡೀಸ್ ಜೂನ್ ೩, ೧೯೩೦ರ ವರ್ಷದಲ್ಲಿ ಮಂಗಳೂರಿನಲ್ಲಿ ಜನಿಸಿದರ...

ಬೆನೆಗಲ್ ನರಸಿ೦ಗ ರಾವ್

Image
ಬೆನೆಗಲ್ ನರಸಿ೦ಗ ರಾವ್  ಈ ಹೆಸರನ್ನು ಕೇಳಿದವರು ಬಹಳ ಕಡಿಮೆ ಮಂದಿ. ದೇಶದ ಶ್ರೇಷ್ಟ ಸಂವಿಧಾನದ ರಚನೆಯಲ್ಲಿ ಅವರ ಪಾತ್ರ ಅತ್ಯಂತ ಹೆಚ್ಚು.ಭಾರತದ ಸ೦ವಿಧಾನ ಅ೦ದ ಕೂಡಲೇ ನಮ್ಮಮುಂದೆ ಬರುವ ಹೆಸರು ಡಾ. ಬಿ.ಅರ್.ಅ೦ಬೇಡ್ಕರ್.  ಆದರೆ ವಾಸ್ತವದಲ್ಲಿ ಸ೦ವಿಧಾನದ ಮೂಲ ಕರಡು ಸಿದ್ಧ ಪಡಿಸಿದವರು ಬಿ.ಎನ್.ರಾವ್ ರಂತಹ  ಕನ್ನಡಿಗ ಎ೦ಬುದು ಬಹುಮ೦ದಿಗೆ ಗೊತ್ತಿಲ್ಲ. ಅವಿಭಅಜ್ಯ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ತಾಲೂಕಿನ  ಕು೦ದಾಪುರ ಸಮೀಪದ ಬೆನೆಗಲ್ ಎ೦ಬ ಹಳ್ಳಿಯಲ್ಲಿ ಫೆಬ್ರವರಿ 26, 1887 ರಲ್ಲಿ ಹುಟ್ಟಿದ  ಇವರು ಮಾಡಿದ ಸಾಧನೆ, ಏರಿದ ಎತ್ತರ ಎಣೆಯಿಲ್ಲದ್ದು  . ಮಂಗಳೂರಿನ ಕೆನರಾ ವಿದ್ಯಾಸಂಸ್ಥೆಯಲ್ಲಿ ಫ್ರೌಡ ಶಿಕ್ಷಣವನ್ನು ಪೂರೈಸಿದ ಬೆನಗಲ್ ಅವರು ಅಂದಿನ ಮದ್ರಸ್ ಪ್ರೆಸಿಡೆನ್ಸಿಯಲ್ಲಿ ಟೋಪ್ಪರ್ ಸ್ಟೂಡೆಂಟ್ ಆಗಿ ಹೊರಹೊಮ್ಮಿದ್ದರು.  ಆದರೆ ಅವರು ಎಲೆಮರೆಯ ಕಾಯ೦ತೆ ಜನಮಾನಸಕ್ಕೆ ಅಪರಿಚಿತರಾಗಿ ಉಳಿದದ್ದು  ಮಾತ್ರ ವಿಪರ್ಯಾಸ.  ಅವರು ದೇಶ ಕ೦ಡ  ಮಹಾನ್ ನ್ಯಾಯವೇತ್ತರಲ್ಲಿ ಒಬ್ಬರು. 1909 ರಲ್ಲಿ ಇ೦ಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ ಪಾಸ್ ಮಾಡಿದ ರಾಯರಿಗೆ ನ್ಯಾಯಾ೦ಗದಲ್ಲಿ ವಿಶೇಷ ಒಲವಿತ್ತು.  ಹಲವಾರು ಉನ್ನತ ಹುದ್ದೆಗಳನ್ನು ಅತ್ಯುತ್ತಮ ರೀತಿಯಲ್ಲಿ ನಿಭಾಯಿಸಿದ ಅವರನ್ನು ಬ್ರಿಟಿಶ್ ಸರಕಾರ ನೈಟ್ನೀ ಹುಡ್ಡಿ ಪ್ರಶಸ್ತಿ ನೀಡಿ  ಗೌರವಿಸಿತ್ತು. 1939 ರಲ್ಲಿ ಬೆ...

"ರಮಾಬಾಯಿ" ರಮಾಶಕ್ತಿ ಮಿಷನ್

Image
ರಮಾಬಾಯಿ ಭಾರತದ ಪ್ರಥಮ ಎಜ್ಯುಕೆಷನಿಸ್ಟ್ ಮಹಿಳೆ ಮಾತ್ರವಲ್ಲ ಈಗ ಜನಪ್ರಿಯವಾಗಿರುವ "kindergarden" ಶಿಕ್ಷಣ ಪದ್ಧತಿಯನ್ನು ಮತ್ತು ಸಚಿತ್ರ ಪಠ್ಯಪುಸ್ತಕಗಳನ್ನು ಶತಮಾನಕ್ಕೆ ಮೊದಲೇ ಭಾರತದ ಹಳ್ಳಿಗಳ ಪ್ರಾಥಮಿಕ ಶಾಲೆಗಳಿಗೆ ಮೊದಲಿಗೆ ಪರಿಚಯಿಸಿದವರು.  ಈಕೆಯ ಬಗ್ಗೆ ಹೆಚ್ಚಿನ ಮಾಹಿತಿ ಇ೦ದಿನ ಸಮಾಜಕ್ಕೆ ಇಲ್ಲದಿರುವುದರಿ೦ದ, ಅವರ ಹೆಸರು ಜನಮಾನಸದಿ೦ದ ದೂರವಾಗುತ್ತಿದೆ. ರಮಾ ಬಾಯಿ  ಜನಿಸಿದ್ದು 1858 ರಲ್ಲಿ. ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲೂಕಿನ ಒ೦ದು ಕುಗ್ರಾಮ "ಮಾಳ"ಎ೦ಬ ಹಳ್ಳಿಯಲ್ಲಿ. ತ೦ದೆ ಅನ೦ತ ಶಾಸ್ತ್ರಿ ಡೋ೦ಗ್ರೆ. ಸ೦ಸ್ಕ್ರತ ದಲ್ಲಿ ವಿಶೇಷ ವಿದ್ವತ್ತು ಹೊ೦ದಿದ್ದ ಶಾಸ್ತ್ರಿಗಳ ಪ್ರಭಾವದಿ೦ದ ಈಕೆಯೂ ಅದ್ವಿತೀಯವೆನಿಸುವ ಭಾಷಾಪಾ೦ಡಿತ್ಯ ಹೊ೦ದಿದ್ದರು.  ಎಳವೆಯಲ್ಲಿಯೇ ರಾಮಾಯಣ, ಮಹಾ ಭಾರತ, ಭಗವದ್ಗೀತೆಯ ಶ್ಲೋಕಗಳನ್ನು ಕ೦ಠಪಾಠ ಮಾಡಿಕೊ೦ಡಿದ್ದ ಈಕೆ ಅವುಗಳ ಅರ್ಥವಿಸ್ತಾರವನ್ನು ಜನರಿಗೆ ಪರಿಣಾಮಕಾರಿಯಾಗಿ ತಿಳಿಹೇಳುವ ಕಲೆ ಸಿಧ್ಧಿಸಿಕೊ೦ಡಿದ್ದರು. ಆ ಕಾಲದಲ್ಲಿ ಉ೦ಟಾದ ಭಯ೦ಕರ ಕ್ಷಾಮದ ಪರಿಣಾಮ ಊರಿಗೆ ಊರೇ ಹಸಿವಿನಿ೦ದ ನರಳಿ ಸಾವಿನ ದವಡೆಯಲ್ಲಿದ್ದಾಗ ತ೦ದೆ-ತಾಯಿ ಮರಣಿಸಿದರು. ಜೀವನೋಪಾಯಕ್ಕೆ ದಾರಿಕಾಣದೇ ರಮಾಬಾಯಿ ತಮ್ಮ ಸೋದರನೊ೦ದಿಗೆ ಕರ್ನಾಟಕದಿ೦ದ ಗುಳೇ ಹೊರಟರು. ಆಗ ಈಕೆಯ ವಯಸ್ಸು 16. ಕರ್ನಾಟಕದಾದ್ಯ೦ತ ಮಾತ್ರವಲ್ಲ, ದೇಶದ ವಿವಿಧ ಭಾಗಗಳಲ್ಲಿ ಕಾಲ್ನಡಿಗೆಯಲ್ಲಿ ಸ೦ಚರಿಸಿ ಉದ್ಗ...

ಪಡುಪಣಂಬೂರಿನಲ್ಲಿ ಭೋಳಾರ ಭೋಜರಾವ್‌ ನೇತೃತ್ವದಲ್ಲಿ ಉಪ್ಪಿನ ಸತ್ಯಾಗ್ರಹ

Image
ಮಂಗಳೂರಿನಲ್ಲಿ 1930ರ ಎ. 13ರಂದು ಮುಂಜಾನೆ ಉಪ್ಪು ತಯಾರಿಸಲು ಸಿದ್ಧರಾದ ಸತ್ಯಾಗ್ರಹಿಗಳ ಗುಂಪು ಬಂದರು ಪ್ರದೇಶಕ್ಕೆ ಹೊರಟಿತು. ಸತ್ಯಾಗ್ರಹಿಗಳು ಮೆರವಣಿಗೆಯಲ್ಲಿ ಹೋಗುತ್ತಿರುವಾಗ, ಪಿ. ಎಲ್‌. ಪುಣಿಚಿತ್ತಾಯರು ಬರೆದಿದ್ದ ಗೀತೆಯನ್ನು ಹಾಡುತ್ತಿದ್ದರು: ಉಪ್ಪಿನ ಕದನಕ್ಕೆ ಹೋರಾಡುವ ಜನರೆ ಉಪ್ಪಿಗೆ ಬೇಕಾಗಿ ಹೋರಾಡಿ ಭಟರೆ ಉಪ್ಪಿಗೂ ಗತಿ ಇಲ್ಲ. ಎಂದರೆ ಏನರ್ಥ ಉತ್ಪನ್ನ ಗಳಿಸಲು ಆಗದ ಬಾಳು ವ್ಯರ್ಥ ಈ ಮೆರವಣಿಗೆಯು ಬಂದರು ಸೇರುವಾಗ ಅಲ್ಲಿ ಸಾವಿರಾರು ಜನರು ಬಂದಿದ್ದರು. ಉಪ್ಪು ನೀರನ್ನು ಮೆರವಣಿಗೆಯಲ್ಲಿ ತಂದು ಕಾಂಗ್ರೆಸ್‌ ಕಚೇರಿಯಲ್ಲಿ ಆ ನೀರನ್ನು ಉಪ್ಪು ತಯಾರಿಸಿದರು. ಮಧ್ಯಾಹ್ನ ಪೊಲೀಸ್‌ ತಂಡದೊಂದಿಗೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಬಂದು ಅಲ್ಲಿ ತಯಾರಿಸಿದ ಉಪ್ಪನ್ನು ಅದಕ್ಕೆ ಉಪಯೋಗಿಸಿದ ಪಾತ್ರೆಯನ್ನು ಉಳಿಸಿ ಉಳಿದ ಕಟ್ಟಿಗೆಯನ್ನು ಒಯ್ದರು. ಅಂದು ಸಂಜೆ ಕೇಂದ್ರ ಮೈದಾನಿನಲ್ಲಿ ಆರ್‌. ಕೆ. ಪ್ರಭು ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿತು. ಉಪ್ಪನ್ನು ಏಲಂ ಮಾಡಲು ಆರಂಭಿಸಲಾಯಿತು. ಆಗ ಪೊಲೀಸರು ಬಂದು ಉಪ್ಪನ್ನು ಸೆಳೆದುಕೊಂಡರು. ಅಂದು ಆರಂಭವಾದ ಉಪ್ಪಿನ ಸತ್ಯಾಗ್ರಹ ಜಿಲ್ಲೆಯ ವಿವಿಧೆಡೆ ಆ ತಿಂಗಳ ಕೊನೆಯ ತನಕ ಸಾಗಿತು. ಪಾನ ನಿಷೇಧಕ್ಕೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಶೇಂದಿ, ಶರಾಬು ಅಂಗಡಿಗಳ ಎದುರು 1930ರಲ್ಲಿ ಪಿಕೆಟಿಂಗ್‌ ನಡೆಯಿತು. ಮೇ 5ನ್ನು ಮದ್ಯ ನಿಷೇಧ ದಿನವೆಂದು ಆಚರಿಸಲಾಯಿತು. ಆ ದಿನ ಮೆ...

"ನೆಲ್ಲಿತೀರ್ಥ" ಪವಿತ್ರ ಗುಹಾತೀರ್ಥದ ಸನ್ನಿಧಿ

Image
ತುಳುನಾಡಿನ ಪ್ರಾಚೀನ ದೇವಾಲಯಗಳಿಗೆಲ್ಲ ಒಂದು ಭವ್ಯ ಪರಂಪರೆಯಿದೆ. ಹಿಂದೆ ಈ ಪ್ರದೇಶವನ್ನು ಆಳಿದ್ದ ಆಳುಪ, ವಿಜಯನಗರ, ಕೆಳದಿ ಸಂಸ್ಥಾನಗಳಿಂದಲೂ, ಸ್ಥಳೀಯ ರಾಜವಂಶೀಯರಿಂದಲೂ ಆರಾಧಿಸಲ್ಪಡುತ್ತಿದ್ದ ಅನೇಕ ದೇವಾಲಯಗಳು ಇಲ್ಲಿವೆ. ದೇವಾಲಯಗಳ ವಿನಿಯೋಗಗಳು ಸಾಂಗವಾಗಿ ನಡೆಯಬೇಕೆಂಬ ಸದುದ್ದೇಶದಿಂದ, ಅಂದಿನ ಅರಸರು ಬಿಟ್ಟುಕೊಟ್ಟ ದತ್ತಿ ಶಾಸನಗಳ ಸಂಖ್ಯೆ ಅಪರಿಮಿತವಾಗಿದೆ. ಇಲ್ಲಿಯ ತುಂಡರಸರಲ್ಲಿ ಚೌಟರು ಸುಪ್ರಸಿದ್ಧರು.  ಇವರು ಮೂಲತಃ ಕರಾವಳಿಯ ಉಳ್ಳಾಲದವರಾಗಿದ್ದು, ಮುಂದೆ ಪುತ್ತಿಗೆ, ಮೂಡಬಿದಿರೆಗಳಲ್ಲಿ ಕೇಂದ್ರಸ್ಥಾನವನ್ನೇರ್ಪಡಿಸಿ ರಾಜ್ಯಭಾರ ಮಾಡುತ್ತಿದ್ದರು. ಇವರು ಸೋಮನಾಥ ದೇವರ ಭಕ್ತರಾಗಿದ್ದರು. ಆದಕಾರಣದಿಂದ ಇವರು ಆಳಿಕೊಂಡಿದ್ದ ಭಾಗದಲ್ಲಿ ಅನೇಕ ಸೋಮನಾಥ ದೇವಾಲಯಗಳಿವೆ. ಉಳ್ಳಾಲ, ಪುತ್ತಿಗೆ, ಅಮ್ಮೆಂಬಳ, ಪೆರ್ಮುದೆ, ಪೋರ್ಕೋಡಿ, ಗುರುಪುರ, ಇರಾ, ನೆಲ್ಲಿತೀರ್ಥ ಮೊದಲಾದ ಸೋಮನಾಥ ದೇವಾಲಯಗಳು ಇಲ್ಲಿವೆ. ಇವುಗಳಲ್ಲಿ ನೆಲ್ಲಿತೀರ್ಥವು ಪವಿತ್ರ ಗುಹಾತೀರ್ಥದ ಸನ್ನಿಧಿಯಲ್ಲಿದ್ದು ಅತಿಮಹಿಮಾನ್ವಿತವಾಗಿದೆ. ಪೂರ್ವಕಾಲದಲ್ಲಿ ಇದು ಜಾಬಾಲಿಮುನಿಯ ಸಿದ್ಧಾಶ್ರಮವಾಗಿತ್ತೆಂದು ಪುರಾಣೋಕ್ತಿಯಿದೆ. ಶ್ರ್‍ಈಕ್ಷೇತ್ರದಲ್ಲಿರುವ ಅರಸರ ಮಂಚ, ಅರಸುಕಟ್ಟೆಗಳು ಇಲ್ಲಿಗೆ ಚೌಟರಸರು ಆಗಾಗ ಭೇಟಿ ಕೊಡುತ್ತಿದ್ದರೆಂಬುದಕ್ಕೆ ಮೂಕಸಾಕ್ಷಿಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸವನ್ನು ಬರೆದಿರುವ ದಿ. ಗಣಪತಿರಾವ್ ಐ...

Bombay Lucky Restaurant

Image
Even though Bunder has lost some of its bustle and sheen, Bombay Lucky Restaurant still remains as busy as it has been for nearly 80 years. Mohammed Iqbal, 32, who is the son of its owner Mohammad Sulaiman, says that in all these years, Bombay Lucky has retained its customers, who keep returning for some simple and tasty biryani. Mr. Iqbal says his father took over the restaurant 40 years ago, but the restaurant itself belonged to the pre-Independence era. The menu has changed little over the years, except that for the last few months the owners have been forced to stop serving fish because of “labour problems”. Over 10 years ago, Mr. Iqbal said, the walls of the restaurant had been decorated with glass paintings of flowers and buildings, but gradually the paintings got worn out, and had to be removed. Then two years ago, the old structure was torn down and a new building – still not finished — replaced the original restaurant. Asked about its unusual name, Mr. Iqbal said even ...

Lady Goschen Hospital Mangalore

Image
  This serves the people of the district and also the rural people of the bordering villages of the neighbouring state. The Kasturaba medical college of the city is attached to this hospital. The present bed Strength of the hospital is around 260. It has specialised services in the medicine, surgery, maternity, gynaecology, X-Ray unit Started at 1987. The Lady Goschen Govt Hospital Mangalore earlier known as the maternity, Hospital is the oldest hospital in the district and date back to 1848. This serves the people of the district and also the rural people of the bordering villages of the neighbouring state. The Kasturaba medical college of the city is attached to this hospital. The present bed Strength of the hospital is around 260. It has specialised services in the medicine, surgery, maternity, gynaecology, X-Ray unit Started at 1987. The Lady Goschen Govt Hospital Mangalore earlier known as the maternity, Hospital is the oldest hospital in the district and date back to 1848....